Webdunia - Bharat's app for daily news and videos

Install App

10ನೇ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌‌ರೇಪ್ ಎಸಗಿ ರೈಲಿನಿಂದ ಮುಂದೆ ಬಿಸಾಕಿದ ದುರುಳರು

Webdunia
ಭಾನುವಾರ, 18 ಜೂನ್ 2017 (17:58 IST)
ಆರು ಜನ ಕಾಮುಕರ ತಂಡವೊಂದು ಹತ್ತನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಗ್ಯಾಂಗ್‌ರೇಪ್ ಎಸಗಿ ನಂತರ ಆಕೆಯನ್ನು ಚಲಿಸುತ್ತಿರುವ ರೈಲಿನ ಮುಂದೆ ಬಿಸಾಕಿದ ಹೇಯ ಘಟನೆ ವರದಿಯಾಗಿದೆ.
 
ಬಾಲಕಿಯ ಸ್ಥಿತಿ ಚಿಂತಾಜನಕವಾಗಿದ್ದು ವೈದ್ಯರ ತಂಡ ನಿರಂತರವಾಗಿ ನಿಗಾವಹಿಸುತ್ತಿದೆ ಎಂದು ಪಾಟ್ನಾ ಮೆಡಿಕಲ್  ಆಸ್ಪತ್ರೆಯ ಮೂಲಗಳು ತಿಳಿಸಿವೆ.
 
ಬಾಲಕಿಯ ಮೇಲೆ ಗ್ಯಾಂಗ್‌ರೇಪ್ ಎಸಗಿದ ಕಾಮುಕರಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದು ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್, ಬಾಲಕಿಯ ಪೋಷಕರಿಗೆ ಭರವಸೆ ನೀಡಿದ್ದಾರೆ.
 
ಲಖಿಸರೈ ಜಿಲ್ಲೆಯ ಲಖೋಚಾಕ್ ಗ್ರಾಮದ ನಿವಾಸಿಯಾದ ಬಾಲಕಿ. ರಾತ್ರಿ ಪ್ರಕೃತಿಯ ಕರೆಗಾಗಿ ಮನೆಯಿಂದ ಹೊರಬಂದಾಗ ಮನೆಯ ಹೊರಗಡೆ ಕಾಯುತ್ತಿದ್ದ ಆರು ಮಂದಿ ಕಾಮುಕರು ಆಕೆಯನ್ನು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಗ್ಯಾಂಗ್‌ರೇಪ್ ಎಸಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆರು ಮಂದಿಯಲ್ಲಿ ಇಬ್ಬರಾದ ಸಂತೋಶ್ ಕುಮಾರ್ ಮತ್ತು ಮೃತ್ಯುಂಜಯ್ ಕುಮಾರ್ ನನಗೆ ಪರಿಚಿತರಾಗಿದ್ದು, ಅವರು ಅತ್ಯಾಚಾರವೆಸಗಿದ ಕೂಡಲೇ ನಾನು ಪ್ರಜ್ಞೆ ಕಳೆದುಕೊಂಡಿದ್ದೆ ಎಂದು ಬಾಲಕಿ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. 
 
ಘಟನೆಯ ಬಗ್ಗೆ ಮಾಹಿತಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಈಗಾಗಲೇ ಸಂತೋಷ್ ಕುಮಾರ್ ಎನ್ನುವ ಆರೋಪಿಯನ್ನು ಬಂಧಿಸಲಾಗಿದೆ. ಆದಾಗ್ಯೂ ಇದೊಂದು ಗ್ಯಾಂಗ್‌ರೇಪ್ ಎಂದು ನನಗನ್ನಿಸುವುದಿಲ್ಲ. ಬಾಲಕಿ ಸಂತೋಷ್‌ಕುಮಾರ್‌ನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು ಎನ್ನುವುದು ತನಿಖೆಯಿಂದ ತಿಳಿದು ಬಂದಿದೆ. ಆಕೆಯ ಮೇಲೆ ಗ್ಯಾಂಗ್‌ರೇಪ್ ಏಕೆ ನಡೆಯಿತು ಎನ್ನುವುದು ತನಿಖೆಯ ನಂತರ ಬಹಿರಂಗವಾಗಲಿದೆ ಎಂದು ತಿಳಿಸಿದ್ದಾರೆ. 
 
ಲಖಿಸರಾಯ್ ಡಿಎಸ್ಪಿ ಪಂಕಜ್ ಕುಮಾರ್ ಅವರ ನೇತೃತ್ವದ ತಂಡವನ್ನು ತನಿಖೆಗಾಗಿ ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/ 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ
Show comments