Webdunia - Bharat's app for daily news and videos

Install App

ಫೇಸ್‌ಬುಕ್ ಚಾಟ್ ಮಾಡ್ಬೇಡಾ ಅಂದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಬಾಲಕಿ

Webdunia
ಭಾನುವಾರ, 17 ಸೆಪ್ಟಂಬರ್ 2017 (16:19 IST)
ಮಿತಿಮೀರಿ ಸಮಯವನ್ನು ಫೇಸ್‌ಬುಕ್‌ನಲ್ಲಿ ಕಳೆಯುತ್ತಿರುವುದಕ್ಕೆ ಸಹೋದರ ಬೈದಿರುವುದನ್ನು ಸಹಿಸದ ಪಿಯುಸಿ ಓದುತ್ತಿದ್ದ ಸಹೋದರಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆ ಪಶ್ಚಿಮ ಬಂಗಾಳದ ಪರಗಣಾ ಜಿಲ್ಲೆಯಲ್ಲಿ ನಡೆದಿದೆ.
ಬಾಲಕಿ ತನ್ನ ಮಲಗುವ ಕೋಣೆಯಲ್ಲಿ ನೇಣುಹಾಕಿಕೊಂಡಿದ್ದಾಳೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.
 
ಬಾಲಕಿಗೆ ಮೊಬೈಲ್ ಕೊಡಿಸಿದ ನಂತರ ಆಕೆ ದಿನದ ಹೆಚ್ಚು ಕಾಲವನ್ನು ಮೊಬೈಲ್‌ ಚಾಟ್ ಮಾಡುವ ಮೂಲಕವೇ ಕಳೆಯುತ್ತಿದ್ದಳು.. ಆಹಾರ ಸೇವನೆ ಮತ್ತು ಅಧ್ಯಯನದಲ್ಲೂ ಆಸಕ್ತಿ ಕಳೆದುಕೊಂಡಿದ್ದಳು. ಶಾಲೆಗೆ ಕೂಡಾ ಹೋಗುತ್ತಿರಲಿಲ್ಲ ಎಂದು ಪೋಷಕರು ತಿಳಿಸಿದ್ದಾರೆ.  
 
ಆಕೆಯ ಸಹೋದರ ಅವಳನ್ನು ದೂಷಿಸಲು ಬಳಸುತ್ತಿದ್ದಳು, ಶುಕ್ರವಾರ ಬೆಳಿಗ್ಗೆ ಸಹ ಅವಳನ್ನು ಖಂಡಿಸಿದರು" ಎಂದು ಅವರು ಹೇಳಿದರು.
 
ಸಹೋದರ ಮೊಬೈಲ್ ಬಳಕೆ ಮತ್ತು ಫೇಸ್‌ಬುಕ್ ಗೀಳಿಗಾಗಿ ಸದಾ ಟೀಕಿಸುತ್ತಿದ್ದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
 
ಪೋಷಕರು ಅನಾರೋಗ್ಯದಿಂದ ಬಳಲುತ್ತಿದ್ದ ಸಂಬಂಧಿಯೊಬ್ಬರನ್ನು ನೋಡಲು ತೆರಳಿದ್ದಾಗ, ಮನೆಯಲ್ಲಿ ಏಕಾಂಗಿಯಾಗಿದ್ದ ಬಾಲಕಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ನಾವು 8 ಗಂಟೆಗೆ ಮರಳಿದಾಗ ಪುತ್ರಿ ಫ್ಯಾನ್‌‌ಗೆ ನೇಣುಹಾಕಿಕೊಂಡಿದ್ದಳು ಎಂದು ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
 
ಪುತ್ರಿ ಸಾಯುವ ಮುನ್ನ ತನ್ನ ವಾಟ್ಸಪ್‌ ಸ್ಟೇಟಸ್ ಬದಲಿಸಿ ಐಯಾಮ್ ಡೆಡ್ ಎನ್ನುವ ಸ್ಟೇಟಸ್ ಹಾಕಿದ್ದಳು. ಫೇಸ್‌ಬುಕ್‌ನಲ್ಲೂ ಕೂಡಾ ತನ್ನ ಜೀವನದ ಮೇಲಿನ ಆಸಕ್ತಿಯನ್ನು ಕಳೆದುಕೊಂಡಿದ್ದಾಗಿ ಬರೆದುಕೊಂಡಿದ್ದಾಳೆ ಎನ್ನಲಾಗಿದೆ.
 
ಏತನ್ಮಧ್ಯೆ ಪೊಲೀಸರು ಬಾಲಕಿಯ ಹತ್ಯೆ ಕುರಿತಂತೆ ಎಲ್ಲಾ ಕೋನಗಳಿಂದ ತನಿಖೆ ನಡೆಸುತ್ತಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments