Webdunia - Bharat's app for daily news and videos

Install App

6 ವರ್ಷದ ಬಾಲಕನನ್ನು ಕಲ್ಲಿನಿಂದ ಸಾಯಿಸಿದ 6ನೇ ತರಗತಿ ಬಾಲಕ

Webdunia
ಶುಕ್ರವಾರ, 29 ಜನವರಿ 2016 (12:51 IST)
6 ತರಗತಿ ಬಾಲಕನೊಬ್ಬ 1 ನೇ ತರಗತಿ ಬಾಲಕನಿಗೆ ಕಲ್ಲಿನಿಂದ ಜಜ್ಜಿ ಸಾಯಿಸಿದ ಆಘಾತಕಾರಿ ಘಟನೆ ತಮಿಳುನಾಡಿನ ಕೊಯಿಮತ್ತೂರಿನಲ್ಲಿ ನಡೆದಿದೆ. 

ಒಂದೇ ಏರಿಯಾದ ನಿವಾಸಿಗಳಾಗಿದ್ದ ಆರೋಪಿ ಮತ್ತು ಮೃತರಿಬ್ಬರೂ ತಿರುಪುರದ ಖಾಸಗಿ ಶಾಲೆಯೊಂದರಲ್ಲಿ ಓದುತ್ತಿದ್ದರು ಎಂದು ತಿಳಿದು ಬಂದಿದೆ. ಜತೆಗೆ ಅವರಿಬ್ಬರೂ ಒಂದೇ ಬಸ್‌ನಲ್ಲಿ ಶಾಲೆಗೆ ಹೋಗುತ್ತಿದ್ದರು. 
 
ಬುಧವಾರ ಮುಂಜಾನೆ 8.15ಕ್ಕೆ ಶಾಲೆಗೆ ತಲುಪಿದ್ದ ವಿದ್ಯಾರ್ಥಿಗಳು, ತರಗತಿ ಪ್ರಾರಂಭವಾಗುವುದಕ್ಕೆ ಮೊದಲು ಯಾವುದೋ ಕಾರಣಕ್ಕೆ ಜಗಳವನ್ನು ಪ್ರಾರಂಭಿಸಿದ್ದರು. ಮಾತಿನಲ್ಲಿ ಪ್ರಾರಂಭವಾದ ಜಗಳ ಕೈ ಕೈ ಮಿಲಾಯಿಸಿ ಹೊಡೆದಾಡುವ ಮಟ್ಟಕ್ಕೆ ಹೋಯಿತು. ಕೋಪದ ಆವೇಶದಲ್ಲಿ ಹಿರಿಯ ಬಾಲಕ ಕಿರಿಯವನ ಹಣೆಗೆ ಕಲ್ಲಿನಿಂದ ಜಜ್ಜಿದಾಗ ಕೆಳಕ್ಕೆ ಬಿದ್ದ ಬಾಲಕನಿಗೆ ಇನ್ನೊಂದು ಕಲ್ಲು ಬಡಿದು ಆತ ಸ್ಥಳದಲ್ಲೇ ಮೃತನಾದ ಎಂದು ಪೊಲೀಸರು ತಿಳಿಸಿದ್ದಾರೆ.
 
ಮೃತನ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದ್ದು ಆರೋಪಿ ಬಾಲಕನನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ.

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments