ಮಸೀದಿಗಳಿಂದ ಧ್ವನಿವರ್ಧಕ ತೆರವುಗೊಳಿಸಿ : ರಾಜ್ ಠಾಕ್ರೆ

Webdunia
ಬುಧವಾರ, 13 ಏಪ್ರಿಲ್ 2022 (07:04 IST)
ಮುಂಬೈ : ಮಸೀದಿಗಳಲ್ಲಿರುವ ಧ್ವನಿವರ್ಧಕಗಳನ್ನು ಮೇ 3ರೊಳಗೆ ಸರ್ಕಾರ ಕ್ರಮಕೈಗೊಂಡು ತೆಗೆದುಹಾಕಬೇಕು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಸರ್ಕಾರಕ್ಕೆ ಗಡುವು ನೀಡಿದ್ದಾರೆ.
 
ಮಂಗಳವಾರ ಥಾಣೆಯಲ್ಲಿ ಸಾರ್ವಜನಿಕ  ರ್ಯಾಲಿ ನಡೆಸಿ ಮಾತನಾಡಿದ ಅವರು, ಶಿವಸೇನೆ ನೇತೃತ್ವದ ರಾಜ್ಯ ಸರ್ಕಾರವು ಮೇ 3ಕ್ಕೂ ಮುನ್ನ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕದಿದ್ದರೆ, ಎಂಎನ್ಎಸ್ ಕಾರ್ಯಕರ್ತರು ಮಸೀದಿಗಳ ಮುಂದೆ ಹನುಮಾನ್ ಚಾಲೀಸಾವನ್ನು ಹಾಕುತ್ತಾರೆ ಎಂದಿದ್ದಾರೆ. 

ಭಾಷಣದ ಬಳಿಕ ಅನೇಕ ಎಂಎನ್ಎಸ್ ಬೆಂಬಲಿಗರು ಮಸೀದಿಗಳ ಮುಂದೆ ಇದ್ದ ಧ್ವನಿವರ್ಧಕಗಳಲ್ಲಿ ಹನುಮಾನ್ ಚಾಲೀಸಾವನ್ನು ಹಾಕಲು ಪ್ರಾರಂಭಿಸಿದರು.

ನಂತರ ಅವರ ವಿರುದ್ಧ ಪೆÇಲೀಸ್ ಕ್ರಮ ಕೈಗೊಂಡ ಬಳಿಕ ರಾಜ್ ಠಾಕ್ರೆ ಅವರು ಮೇ 3 ರೊಳಗೆ ರಾಜ್ಯ ಸರ್ಕಾರ ಕ್ರಮ ಕೈಗೊಂಡು ಎಲ್ಲಾ ಧ್ವನಿವರ್ಧಕಗಳನ್ನು ತೆಗೆದುಹಾಕದಿದ್ದರೆ, ಮುಂದೆ ನಡೆಯುವ ಅವಂತಾರಗಳಿಗೆ ತಾವು ಮತ್ತು ಅವರ ಪಕ್ಷದ ಕಾರ್ಯಕರ್ತರು ಜವಾಬ್ದಾರರಾಗಿರುವುದಿಲ್ಲ ಎಂದು ಹೇಳಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರ ಯುವಜನರನ್ನು ಅವಮಾನಿಸುತ್ತಿದೆ: ಓವೈಸಿ ಗರಂ

ಹೆಣ್ಣೆಂಬ ಕಾರಣಕ್ಕೆ ಸ್ವಂತ ಮಗುವನ್ನು ಸಂಪ್‌ಗೆ ಹಾಕಿ ಕೊಲೆಗೈದ ಪಾಪಿ ತಂದೆ

ಮುಂದಿನ ಸುದ್ದಿ
Show comments