Webdunia - Bharat's app for daily news and videos

Install App

ತಿರುಪತಿ ದೇವಾಲಯ ಹಿಂದೂಗಳಿಗೆ ಸೇರಿದ್ದು: ತಿರುಪತಿಯಲ್ಲಿ ಇನ್ಮೇಲೆ ಎಲ್ಲಾ ಚೇಂಜ್ ಮಾಡ್ತೀನಿ ಎಂದ ಚಂದ್ರಬಾಬು ನಾಯ್ಡು

Krishnaveni K
ಗುರುವಾರ, 13 ಜೂನ್ 2024 (14:39 IST)
ತಿರುಮಲ: ತಿರುಪತಿ ದೇವಾಲಯ ಹಿಂದೂಗಳಿಗೆ ಸೇರಿದ್ದು. ಇಲ್ಲಿ ಇಷ್ಟು ದಿನ ನಡೆಯುತ್ತಿದ್ದ ಎಲ್ಲಾ ಭ್ರಷ್ಟಾಚಾರಗಳಿಗೂ ಕೊನೆ ಹಾಡುತ್ತೇನೆ ಎಂದು ಆಂಧ್ರ ಪ್ರದೇಶ ನೂತನ ಸಿಎಂ ಚಂದ್ರಬಾಬು ನಾಯ್ಡು ಗುಡುಗಿದ್ದಾರೆ.

ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ನಿನ್ನೆಯಷ್ಟೇ ಪ್ರಮಾಣ ವಚನ ಸ್ವೀಕರಿಸಿದ ಚಂದ್ರಬಾಬು ನಾಯ್ಡು ಇಂದು ಕುಟುಂಬ ಸಮೇತರಾಗಿ ತಿರುಪತಿಗೆ ಭೇಟಿ ನೀಡಿದ್ದಾರೆ. ಈ ವೇಳೆ ತಿರುಪತಿ ಆಡಳಿತ ಮಂಡಳಿಯಿಂದಲೇ ‘ಸ್ವಚ್ಛತಾ’ ಕೆಲಸ ಶುರು ಮಾಡಬೇಕಿದೆ ಎಂದಿದ್ದಾರೆ.

‘ತಿರುಪತಿ ಆಡಳಿತ ಮಂಡಳಿಯಿಂದಲೇ ಭ್ರಷ್ಟಾಚಾರ ನಿರ್ಮೂಲನೆ ಶುರು ಮಾಡಲಿದ್ದೇವೆ. ತಿರುಪತಿ ಹಿಂದೂಗಳಿಗೆ ಸೇರಿದ್ದು. ಇದರ ರಕ್ಷಣೆಗೆ ನಾನು ಸದಾ ಬದ್ಧ. ಇನ್ಮುಂದೆ ತಿರುಪತಿಯಲ್ಲಿ ಕೇವಲ ಗೋವಿಂದ ಗೋವಿಂದ ಎನ್ನುವ ಮಂತ್ರ ಮಾತ್ರ ಕೇಳಬೇಕು’ ಎಂದು ಚಂದ್ರಬಾಬು ನಾಯ್ಡು ಖಡಕ್ ಆಗಿ ಹೇಳಿದ್ದಾರೆ.

ಅಲ್ಲದೆ, ಆಂಧ್ರಪ್ರದೇಶವನ್ನು ದೇಶದಲ್ಲೇ ನಂ.1 ರಾಜ್ಯವಾಗಿ ಮಾಡುವುದು ನನ್ನ ಗುರಿ. ಇನ್ಮುಂದೆ ಭ್ರಷ್ಟಾಚಾರ, ಅನ್ಯಾಯಗಳಿಗೆ ನಮ್ಮಲ್ಲಿ ಜಾಗವಿರಲ್ಲ ಎಂದಿದ್ದಾರೆ. ತಿರುಪತಿಗೆ ಭೇಟಿ ನೀಡಿದ ಬಳಿಕ ಅವರು ಅಧಿಕೃತವಾಗಿ ಸಿಎಂ ಕಾರ್ಯಾಲಯಕ್ಕೆ ತೆರಳಿ ಅಧಿಕಾರ ಸ್ವೀಕರಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments