Webdunia - Bharat's app for daily news and videos

Install App

ಜೈಲಿನಿಂದಲೇ ಸಿಎಂ ಕೇಜ್ರಿವಾಲ್ ಮೊದಲ ಆದೇಶ: ಅವರಿಗೆ ನಿಮ್ಮದೇ ಚಿಂತೆ ಎಂದ ಆಪ್ ನಾಯಕಿ

Krishnaveni K
ಭಾನುವಾರ, 24 ಮಾರ್ಚ್ 2024 (14:14 IST)
ನವದೆಹಲಿ: ಅಬಕಾರಿ ಅಕ್ರಮ ಹಗರಣದಲ್ಲಿ 100 ಕೋಟಿ ರೂ. ಕಿಕ್ ಬ್ಯಾಕ್ ಪಡೆದ ಆರೋಪದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಜೈಲಿನಿಂದಲೇ ಮೊದಲ ಆದೇಶ ಹೊರಡಿಸಿದ್ದಾರೆ.

ಅಕ್ರಮ ಆರೋಪದಲ್ಲಿ ಬಂಧಿತರಾಗಿದ್ದರೂ ಕೇಜ್ರಿವಾಲ್ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ಬದಲಾಗಿ ಜೈಲಿನಲ್ಲಿದ್ದುಕೊಂಡೇ ಅಧಿಕಾರ ಚಲಾಯಿಸುತ್ತಿದ್ದಾರೆ. ಈ ನಡುವೆ ಜೈಲಿನಲ್ಲಿಯೇ ದೆಹಲಿಯ ನೀರಿನ ಸಮಸ್ಯೆ ಕುರಿತು ಆಪ್ತರ ಮೂಲಕ ಹೊಸ ಆದೇಶ ಹೊರಡಿಸಿದ್ದಾರೆ. ಇದನ್ನು ಆಪ್ ನಾಯಕಿ, ದೆಹಲಿ ಜಲ ಸಚಿವೆ ಅತಿಶಿ ಮರ್ಲೆನಾ ಓದಿದ್ದಾರೆ.

ಕೇಜ್ರಿವಾಲ್ ನೀಡಿದ ಆದೇಶವನ್ನು ಮಾಧ‍್ಯಮಗಳ ಮುಂದೆ ಓದಿ ಅತಿಶಿ, ಜೈಲಿನಲ್ಲಿದ್ದರೂ ಮುಖ್ಯಮಂತ್ರಿಗಳಿಗೆ ಜನರದ್ದೇ ಚಿಂತೆ ಎಂದಿದ್ದಾರೆ. ‘ದೆಹಲಿಯ ಕೆಲವು ಪ್ರದೇಶಗಳಲ್ಲಿ ಒಳಚರಂಡಿ ಮತ್ತು ನೀರಿನ ಸಮಸ್ಯೆಗಳಿವೆ ಎಂದು ತಿಳಿದುಕೊಂಡಿದ್ದೇನೆ. ಇದರಿಂದ ನಾನು ಚಿಂತಿತನಾಗಿದ್ದೇನೆ. ನಾನು ಜೈಲಿನಲ್ಲಿರುವುದರಿಂದ ಜನರಿಗೆ ತೊಂದರೆಯಾಗಬಾರದು ಎಂದು ಹೇಳಿದ್ದಾರೆ ಎಂದು ಅತಿಶಿ ಹೇಳಿದ್ದಾರೆ.

ಕೇಜ್ರಿವಾಲ್ ತಮ್ಮ ಹೊಸ ಆದೇಶದಲ್ಲಿ ದೆಹಲಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಅಗತ್ಯ ಬಿದ್ದರೆ ಲೆಫ್ಟಿನೆಂಟ್ ಗವರ್ನರ್ ಜೊತೆ ಮಾತನಾಡಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಪರಿಹಾರ ನೀಡಬೇಕು ಎಂದು ಸೂಚಿಸಿದ್ದಾರೆ ಎಂದು ಅತಿಶಿ ಆದೇಶ ಓದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments