Webdunia - Bharat's app for daily news and videos

Install App

ಮಾನನಷ್ದ ಮೊಕದ್ದಮೆಗೆ ಸರ್ಕಾರದ ಹಣ ದುರ್ಬಳಕೆ ಮಾಡಿದ ಆರೋಪದಲ್ಲಿ ಸಿಎಂ ಕೇಜ್ರಿವಾಲ್

Webdunia
ಮಂಗಳವಾರ, 4 ಏಪ್ರಿಲ್ 2017 (11:04 IST)
ನವದೆಹಲಿ: ದೆಹಲಿ ಸಿಎಂ ಕೇಜ್ರಿವಾಲ್ ರ ಮೇಲೆ ಕೇಂದ್ರ ಸಚಿವ ಅರುಣ್ ಜೇಟ್ಲಿ ಮಾನ ನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿ ವಿಚಾರಣೆ ನ್ಯಾಯಾಲಯದಲ್ಲಿದೆ. ಆದರೆ ಇದರ ವಿಚಾರಣೆಗಾಗಿ ಕೇಜ್ರಿವಾಲ್ ಗೆ ವಕೀಲ ರಾಮ್ ಜೇಠ್ಮಲಾನಿಗೆ ಕೊಡಬೇಕಿರುವ 3 ಕೋಟಿ ಮೊತ್ತದ ಬಿಲ್ ಗೆ ಸರ್ಕಾರದ ಹಣ ಬಳಸಿಕೊಳ್ಳಲು ಮುಂದಾಗಿದ್ದಾರೆಂಬ ವಿವಾದವೆಬ್ಬಿದೆ.


  
ಐಟಿ ದಾಳಿಗೆ ಸಂಬಂಧಿಸಿದಂತೆ ಕೇಜ್ರಿವಾಲ್ ವಿರುದ್ಧ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಮಾನ ನಷ್ಟ ಮೊಕದ್ದಮೆ ಹೂಡಿದ್ದರು. ಈ ಮೊಕದ್ದಮೆಯ ವಿಚಾರಣೆ ನ್ಯಾಯಾಲಯದಲ್ಲಿದೆ. ಇದರ ವಿಚಾರಣೆಗಾಗಿ ಕೇಜ್ರಿವಾಲ್ ತಮ್ಮ ಪರ ವಾದ ಮಂಡಿಸಲು ಖ್ಯಾತ ವಕೀಲ ಬಿಜೆಪಿಯವರೇ ಆದ ರಾಮ್ ಜೇಠ್ಮಲಾನಿ ಅವರನ್ನು ನೇಮಿಸಿದ್ದಾರೆ. ಜೇಠ್ಮಲಾನಿ ಈ ಪ್ರಕರಣದ ವಿಚಾರಣೆಗೆ 1 ಕೋಟಿ ರೂ. ಹಾಗೂ ಪ್ರತೀ ವಿಚಾರಣೆಗೆ 3.42 ಕೋಟಿ ರೂ.ಗಳಂತೆ ಬಿಲ್ ನೀಡಿದ್ದರು.


ಈ ಬಿಲ್ ಪಾವತಿಸಲು ಹಸಿರು ನಿಶಾನೆ ತೋರುವಂತೆ ಕೇಜ್ರಿವಾಲ್ ಸರ್ಕಾರದ ಸಚಿವ ಮನೀಶ್ ಸಿಸೋಡಿಯಾ ದೆಹಲಿ ಲೆಫ್ಟಿನೆಂಟ್ ಜನರಲ್ ಅನಿಲ್ ಬೈಜಾಲ್ ಗೆ ಪತ್ರ ಬರೆದಿರುವುದನ್ನು ಸುದ್ದಿ ವಾಹಿನಿಯೊಂದು ವರದಿ ಮಾಡಿದೆ. ಕೇಜ್ರಿವಾಲ್ ರ ವೈಯಕ್ತಿಕ ಕಾನೂನು ಹೋರಾಟಕ್ಕೆ ಸರ್ಕಾರದ ಹಣ ಬಳಸಿಕೊಳ್ಳುವುದಕ್ಕೆ ಕಾನೂನು ಸಚಿವಾಲಯ ತಗಾದೆ ತೆಗೆದಿದೆ. ಇದೀಗ ದೆಹಲಿ ಮಹಾನಗರ ಪಾಲಿಕೆ ಚುನಾವಣೆಗೆ ಸಜ್ಜಾಗುತ್ತಿರುವ ಕೇಜ್ರಿವಾಲ್ ಗೆ ಉರುಳಾಗುವ ಸಾಧ್ಯತೆಯಿದೆ. 

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments