Select Your Language

Notifications

webdunia
webdunia
webdunia
webdunia

ಸಿಎಂ ಖಟ್ಟರ್ ರಾಜೀನಾಮೆ ನೀಡುವ ಅಗತ್ಯವಿಲ್ಲ: ಬಿಜೆಪಿ

ಸಿಎಂ ಮನೋಹರ್ ಲಾಲ್ ಖಟ್ಟರ್
ಅತ್ಯಾಚಾರ ಆರೋಪಿ ಗುರ್ಮಿತ್ ರಾಮ್ ರಹೀಮ್ ಬೆಂಬಲಿಗರನ್ನು ನಿಗ್ರಹಿಸುವಲ್ಲಿ ವಿಫಲವಾಗಿದ್ದಾರೆ ಎನ್ನುವ ಆರೋಪಗಳನ್ನು ತಳ್ಳಿಹಾಕಿರುವ ಬಿಜೆಪಿ ಹೈಕಮಾಂಡ್, ಸಿಎಂ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದೆ.
ನಿನೆ ನಡೆದ ಹಿಂಸಾಚಾರದಲ್ಲಿ 35 ಕ್ಕೂ ಹೆಚ್ಚು ಜನ ಸಾವನ್ನಪ್ಪಿ ನೂರಾರು ಜನ ಗಾಯಗೊಂಡಿದ್ದಲ್ಲದೇ ಹಲವಾರು ವಾಹನಗಳನ್ನು ಜಖಂಗೊಳಿಸಿದ ಘಟನೆ ವರದಿಯಾಗಿತ್ತು.
 
ಪಂಜಾಬ್, ಹರಿಯಾಣಾ ಹೈಕೋರ್ಟ್ ಘಟನೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, ರಾಜಕೀಯ ಲಾಭಕ್ಕಾಗಿ ಹಿಂಸಾಚಾರ ತಡೆಯುವಲ್ಲಿ ಸಿಎಂ ಖಟ್ಟರ್ ವಿಫಲವಾಗಿದ್ದಾರೆ ಎಂದು ಕಿಡಿಕಾರಿತ್ತು.
 
ಆದಾಗ್ಯೂ ಬಿಜೆಪಿ ಹೈಕಮಾಂಡ್ ಸರಕಾರ ಪರಿಸ್ಥಿತಿಯನ್ನು ಸೂಕ್ತವಾಗಿ ನಿಭಾಯಿಸಿದ್ದರಿಂದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರಾಜೀನಾಮೆ ಕೇಳುವುದಿಲ್ಲ ಎಂದು ಸ್ಪಷ್ಟಪಡಿಸಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಎಂ.ಕೆ.ಗಣಪತಿ ಪ್ರಕರಣದ ಬಗ್ಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ