Webdunia - Bharat's app for daily news and videos

Install App

ಕಾಲು ಮುರಿದಿದೆ, ಎದೆನೋವಾಗ್ತಿದೆ: ನಂದಿಗ್ರಾಮ ದಾಳಿ ಬಗ್ಗೆ ದೀದಿ ಆರೋಪ

Webdunia
ಗುರುವಾರ, 11 ಮಾರ್ಚ್ 2021 (10:54 IST)
ಕೋಲ್ಕೊತ್ತಾ: ಪಶ್ಚಿಮ ಬಂಗಾಲದಲ್ಲಿ ನಿನ್ನೆ ಚುನಾವಣಾ ಪ್ರಚಾರ ವೇಳೆ ನಂದಿಗ್ರಾಮದಲ್ಲಿ ತಮ್ಮ ಮೇಲೆ 3-4 ದುಷ್ಕರ್ಮಿಗಳಿಂದ ದಾಳಿ ನಡೆದಿದೆ ಎಂದಿದ್ದ ಮಮತಾ ಆರೋಪಿಸಿದ್ದರು. ಈ ಘಟನೆಯಲ್ಲಿ ತಮ್ಮ ಕಾಲು ಮುರಿದಿದ್ದು, ಎದೆನೋವಾಗ್ತಿದೆ ಎಂದು ಮಮತಾ ಹೇಳಿಕೊಂಡಿದ್ದಾರೆ.


ನಂದಿಗ್ರಾಮದಲ್ಲಿ ಪ್ರಚಾರ ವೇಳೆ ಕೆಲವರು ತಳ್ಳಾಟ ನಡೆಸಿದ್ದಾರೆ. ಈ ವೇಳೆ ಮಮತಾ ಕಾಲು ಕಾರಿಗೆ ಬಡಿದು, ಗಾಯಗಳಾಗಿತ್ತು. ಆ ಬಳಿಕ ಮಮತಾ ಕೋಲ್ಕೊತ್ತಾಗೆ ಪ್ರಯಾಣ ಬೆಳೆಸಿದ್ದರು. ಇದು ತನ್ನ ವಿರುದ್ಧ ನಡೆದ ಉದ್ದೇಶಪೂರ್ವಕ ಸಂಚು ಎಂದು ಮಮತಾ ಆರೋಪಿಸಿದ್ದರು.

ಮಮತಾ ಆರೋಗ್ಯ ತಪಾಸಣೆ ಮಾಡಿದ ವೈದ್ಯರು ಆಕೆಯ ಕಾಲಿನ ಮೂಳೆ ಮುರಿತಕ್ಕೊಳಗಾಗಿರುವುದನ್ನು ಸ್ಪಷ್ಟಪಡಿಸಿದ್ದಾರೆ. ಅಷ್ಟೇ ಅಲ್ಲದೆ, ಸಣ್ಣ ಪ್ರಮಾಣದಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಉಸಿರಾಟದಲ್ಲೂ ಏರುಪೇರಾಗುತ್ತಿದೆ ಎಂದು ಸಿಎಂ ಮಮತಾ ಹೇಳಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಆದರೆ ಇದೆಲ್ಲವೂ ದೀದಿ ನಾಟಕ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ. ಜನರ ಸಹಾನುಭೂತಿ ಗಿಟ್ಟಿಸಿಕೊಳ್ಳಲು ಈ ರೀತಿ ನಾಟಕವಾಡುತ್ತಿದ್ದಾರೆ. ಸಿಎಂ ಭದ್ರತೆ ಪೊಲೀಸರ ಪಡೆಯೇ ಇದೆ. ಒಂದು ವೇಳೆ ಅವರ ಮೇಲೆ ದಾಳಿ ನಡೆದಿದ್ದರೆ, ಪೊಲೀಸರು ಸುಮ್ಮನಾಗಿದ್ದೇಕೆ ಎಂದು ಬಿಜೆಪಿ ಪ್ರಶ್ನಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಸ್ವಾತಂತ್ರ್ಯಕ್ಕೆ ದಿನಕ್ಕೆ ಪ್ರಧಾನಿ ಮೋದಿ ಏನು ಭಾಷಣ ಮಾಡಬೇಕು, ನೀವೇ ನಿರ್ಧರಿಸಲು ಇಲ್ಲಿದೆ ಅವಕಾಶ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

ಮುಂದಿನ ಸುದ್ದಿ
Show comments