Webdunia - Bharat's app for daily news and videos

Install App

ವಯನಾಡು ಭೂಕುಸಿತದ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಸಿಎಂ ಪಿಣರಾಯಿ

Sampriya
ಮಂಗಳವಾರ, 30 ಜುಲೈ 2024 (19:15 IST)
ಕೇರಳ: ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತರ ಸಂಖ್ಯೆ 93ಕ್ಕೆ ಏರಿಯಾಗಿದ್ದು, 3069ಮಂದಿಯನ್ನು ನಿರಾಶ್ರಿತರ ಕೇಂದ್ರಕ್ಕೆ ಸ್ಥಳಂತರಿಸಲಾಗಿದೆ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಹೇಳಿದರು.

ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭೂಕುಸಿತದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು. ಜುಲೈ 30 ರ ಬುಧವಾರ ಎರಡು ಬಾರಿ ವಯಾನಾಡಿನಲ್ಲಿ ರಾಜ್ಯ ಕಂಡರಿಯದ ನೈಸರ್ಗಿಕ ವಿಕೋಪ ಸಂಭವಿಸಿದೆ.  ಭೂಕುಸಿತದಿಂದಾಗಿ ಅವಶೇಷಗಳಡಿ ಸಿಲುಕಿದ್ದ 93 ಜನರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇದರಲ್ಲಿ 34 ಜನರು ಗುರುತು ಪತ್ತೆಯಾಗಿದ್ದು, 18 ಶವಗಳ ಮರಣೋತ್ತರ ನಡೆಸಿ ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು ಎಂದರು.

ಮುಂಜಾನೆ 2 ಗಂಟೆಗೆ ಸಂಭವಿಸಿದ ಮೊದಲ ಭೂಕುಸಿತ ಹಾಗೂ 4.10 ಕ್ಕೆ ಎರಡನೇ ಭೂಕುಸಿತ ಸಂಭವಿಸಿದೆ. ಮೆಪ್ಪಾಡಿ, ಮುಂಡಕ್ಕೈ, ಚೂರಲ್‌ಮಲ ಪ್ರದೇಶಗಳು ಜಲಾವೃತವಾಗಿದ್ದು, ಚಿರಕುಮಲ ಮತ್ತು ಮುಂಡಕೈ ನಡುವಿನ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿದೆ. ಇರುವಝಿಂಜಿಪ್ಪುಳ ಎರಡು ಭಾಗವಾಯಿತು. ಹಾಗೂ ವೆಲ್ಲರ್ಮಳ ಸರಕಾರಿ ಶಾಲೆ ಮಣ್ಣಿನಡಿಯಲ್ಲಿ ಹೂತು ಹೋಗಿದೆ.

'ಇದು ನಮ್ಮ ರಾಜ್ಯವು ಕಂಡ ಅತ್ಯಂತ ದುರಂತ ನೈಸರ್ಗಿಕ ವಿಕೋಪಗಳಲ್ಲಿ ಒಂದಾಗಿದೆ. ಸಾಧ್ಯವಿರುವ ಎಲ್ಲ ಮಾರ್ಗಗಳ ಮೂಲಕ ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗುತ್ತಿದೆ,'' ಎಂದರು.

ವಯನಾಡಿನ 45 ರಕ್ಷಣಾ ಶಿಬಿರಗಳಲ್ಲಿ 3,069 ಜನರನ್ನು ಸ್ಥಳಾಂತರಿಸಲಾಗಿದ್ದು, ರಾಜ್ಯಾದ್ಯಂತ 5531 ಜನರು 118 ಶಿಬಿರಗಳಲ್ಲಿ ತಂಗಿದ್ದಾರೆ. ಅವರಿಗೆ ಆಹಾರ ಮತ್ತಿತರ ಅಗತ್ಯ ವಸ್ತುಗಳ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸಿಎಂ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments