Webdunia - Bharat's app for daily news and videos

Install App

ನಿಮ್ಮಂಥವರಿಗೆ ಇಲ್ಲಿ ಜಾಗವಿಲ್ಲ ಎಂದು ಅಮಿತ್ ಶಾಗೆ ಹೇಳಿದ್ಯಾರು?!

Webdunia
ಸೋಮವಾರ, 29 ಅಕ್ಟೋಬರ್ 2018 (09:44 IST)
ತಿರುವನಂತಪುರಂ: ಕೇರಳ ಪ್ರವಾಸದಲ್ಲಿದ್ದಾಗ ಅಲ್ಲಿನ ಸಿಪಿಐ ಎಂ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾಗೆ ಸಿಎಂ ಪಿಣರಾಯಿ ವಿಜಯನ್ ತಿರುಗೇಟು ನೀಡಿದ್ದಾರೆ.

‘ನಿಮ್ಮಂಥವರಿಗೆ ಇಲ್ಲಿ ಜಾಗವಿಲ್ಲ. ನಮ್ಮ ಸುಭದ್ರ ಸರ್ಕಾರ ಉರುಳಿಸಲು ನಿಮ್ಮ ಬಲ ಸಾಕಾಗಲ್ಲ ಎಂದು ಸಿಎಂ ಪಿಣರಾಯಿ ವಿಜಯನ್ ಅಮಿತ್ ಶಾಗೆ ತಿರುಗೇಟು ನೀಡಿದ್ದಾರೆ.

ಕೇರಳ ಸರ್ಕಾರ ಶಬರಿಮಲೆ ವಿಚಾರದಲ್ಲಿ ಹಿಂದೂಗಳ ಭಾವನೆಗಳೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಅಮಿತ್ ಶಾ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ತಿರುಗೇಟು ನೀಡಿರುವ ಪಿಣರಾಯಿ ವಿಜಯನ್, ನಮ್ಮ ಸರ್ಕಾರವನ್ನು ಉರುಳಿಸುತ್ತೇವೆ ಎಂದು ಅಮಿತ್ ಶಾ ಹೇಳಿದ್ದು ಕೇಳಿದ ಹಾಗಾಯಿತು. ಆದರೆ ಅವರ ಟೊಳ್ಳು ಶಕ್ತಿಯಿಂದ ನಮ್ಮ ಸುಭದ್ರ ಸರ್ಕಾರ ಉರುಳಿಸಲಾಗದು. ಇಂತಹ ಗಿಮಿಕ್ ನ್ನೆಲ್ಲಾ ಅವರು ಇಲ್ಲಿ ಇಟ್ಟುಕೊಳ್ಳುವುದು ಬೇಡ, ಗುಜರಾತ್ ನಲ್ಲಿ ಇದೆಲ್ಲಾ ನಡೆಯಬಹುದು. ನೀವು ಭಾರೀ ನಿರೀಕ್ಷೆಯಿಟ್ಟುಕೊಂಡು ಇಲ್ಲಿಗೆ ಬಂದಿರುತ್ತೀರಿ. ಆದರೆ ನಿಮ್ಮಂಥವರಿಗೆಲ್ಲಾ ಇಲ್ಲಿ ಜಾಗವಿಲ್ಲ’ ಎಂದು ಲೇವಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಯೂಟ್ಯೂಬರ್‌ ಸಮೀರ್‌ಗೆ ಧರ್ಮಸ್ಥಳದ ಎಸ್‌ಐಟಿಯಿಂದ ಬಂತು ನೋಟಿಸ್‌

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ವಿಜಯೇಂದ್ರ

ಕಿಂಗ್‌ ಕೋಬ್ರಾ ಪೋಟೋ ರಾಕೆಟ್‌: ಇಬ್ಬರ ವಿರುದ್ಧ ಎಫ್‌ಐಆರ್‌

ಧರ್ಮಸ್ಥಳದಲ್ಲಿ ಮಗಳು ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ್ದ ಸುಜಾತಾ ಭಟ್‌ಗೆ ಎದುರಾಯಿತು ವಿಚಾರಣೆ

ಮುಂದಿನ ಸುದ್ದಿ
Show comments