Webdunia - Bharat's app for daily news and videos

Install App

ಲೋಕಸಭೆ ಚುನಾವಣೆ ಬಳಿಕ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಬಿಜೆಪಿಗೆ!

Krishnaveni K
ಬುಧವಾರ, 27 ಮಾರ್ಚ್ 2024 (10:34 IST)
Photo Courtesy: Twitter
ಹೈದರಾಬಾದ್: ತೆಲಂಗಾಣದಲ್ಲಿ ಕಾಂಗ್ರೆಸ್ ಕಟ್ಟಿ ಬೆಳೆಸಿದ, ಅಧಿಕಾರಕ್ಕೆ ತರಲು ಶ್ರಮಿಸಿದ ಸಿಎಂ ರೇವಂತ್ ರೆಡ್ಡಿ ಲೋಕಸಭೆ ಚುನಾವಣೆ ಮುಗಿದ ಬಳಿಕ ಬಿಜೆಪಿ ಸೇರುತ್ತಾರಂತೆ! ಹೀಗೊಂದು ಹೇಳಿಕೆಯನ್ನು ಮಾಜಿ ಸಚಿವ ಕೆಟಿ ರಾಮ್ ರಾವ್ ಹೇಳಿದ್ದಾರೆ.

ರೇವಂತ್ ರೆಡ್ಡಿ ಇತ್ತೀಚೆಗೆ ಪ್ರಧಾನಿ ಮೋದಿಯ ಜೊತೆ ಕಾರ್ಯಕ್ರಮವೊಂದರಲ್ಲಿ ವೇದಿಕೆ ಹಂಚಿಕೊಂಡಿದ್ದರು. ಈ ವೇಳೆ ಮೋದಿಯನ್ನು ಹೊಗಳಿ ಅಣ್ಣನಂತೆ ಎಂದಿದ್ದರು. ಗುಜರಾತ್ ಮಾದರಿಯಂತೆ ನಮ್ಮ ರಾಜ್ಯವನ್ನೂ ಮಾದರಿ ರಾಜ್ಯ ಮಾಡುವುದಾಗಿ ಹೇಳಿದ್ದರು. ಅವರ ಈ ಹೇಳಿಕೆ ಕಾಂಗ್ರೆಸ್ಸಿಗರ ಹುಬ್ಬೇರುವಂತೆ ಮಾಡಿತ್ತು.

ಇದೀಗ ರೇವಂತ್ ಬಗ್ಗೆ ಮಾತನಾಡಿರುವ ಕೆಟಿ ರಾಮರಾವ್ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 40 ಸ್ಥಾನವನ್ನು ಗೆಲ್ಲುವುದೂ ಕಷ್ಟ.  ಕಾಂಗ್ರೆಸ್ ಹೀನಾಯ ಸೋಲಿನ ಬಳಿಕ ರೇವಂತ್ ರೆಡ್ಡಿ ಬಿಜೆಪಿ ಸೇರಿಕೊಳ್ಳಲಿದ್ದಾರೆ. ಬಿಜೆಪಿಗೆ ನಿಷ್ಠೆ ಬದಲಾಯಿಸಿದ ಮೊದಲ ಕಾಂಗ್ರೆಸ್ ನಾಯಕ ಎನಿಸಿಕೊಳ್ಳಲಿದ್ದಾರೆ ಎಂದಿದ್ದಾರೆ.

ಅಲ್ಲದೆ ರೇವಂತ್ ರೆಡ್ಡಿ ವಿರುದ್ಧ ಗಂಭೀರ ಆರೋಪ ಮಾಡಿರುವ ಕೆಟಿ ರಾಮರಾವ್, ಲೋಕಸಭೆ ಚುನಾವಣೆಗೆ ಮುನ್ನ ರೇವಂತ್ ದೆಹಲಿಯಲ್ಲಿರುವ ತಮ್ಮ ಹೈಕಮಾಂಡ್ ಗೆ 2,500 ಕೋಟಿ ರೂ. ಕಳುಹಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments