Webdunia - Bharat's app for daily news and videos

Install App

ಕಂಗ್ರಾಡ್ಸ್ ಮೇಡಂ.. ಪ್ರಿಯಾಂಕ ಗಾಂಧಿಗೆ ಬೊಕೆ ನೀಡಿ ಅಭಿನಂದಿಸಿದ ಸಿಎಂ ಸಿದ್ದರಾಮಯ್ಯ

Krishnaveni K
ಶುಕ್ರವಾರ, 29 ನವೆಂಬರ್ 2024 (14:54 IST)
ದೆಹಲಿ:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಯನಾಡು ಸಂಸದೆ ಪ್ರಿಯಾಂಕ ಗಾಂಧಿ ವಾದ್ರಾ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು.

ಸಂಸತ್ತಿನ ಪ್ರತಿಪಕ್ಷ ನಾಯಕರ ಕಚೇರಿಯಲ್ಲಿ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ಇದೇ ವೇಳೆ ಸಿದ್ದರಾಮಯ್ಯ ಅವರು ವಯನಾಡು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಪ್ರಿಯಾಂಕ ಗಾಂಧಿ ಅವರನ್ನು ಅಭಿನಂದಿಸಿದರು. ನಿನ್ನೆಯಷ್ಟೇ ಪ್ರಿಯಾಂಕ ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ವಿಧಾನಸಭೆಯ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರು ಸಿದ್ದರಾಮಯ್ಯ ಅವರಿಗೆ ಅಭಿನಂದನೆ ತಿಳಿಸಿದರು. ಇದಾದ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನೂ ಭೇಟಿ ಮಾಡಿ ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.

ಒಂದೆಡೆ ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆಗಳಾಗುತ್ತಿವೆ. ಇದರ ನಡುವೆ ಸಿಎಂ ದೆಹಲಿಯಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದಾರೆ. ರಾಜಕೀಯದ ಜೊತೆಗೆ ರಾಜ್ಯದ ಅಭಿವೃದ್ಧಿಗಾಗಿ ಕೇಂದ್ರ ನಾಯಕರನ್ನು ಭೇಟಿ ಮಾಡುವ ಉದ್ದೇಶದಿಂದ ಸಿಎಂ ದೆಹಲಿಗೆ ತೆರಳಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ನೂತನ ಉಪರಾಷ್ಟ್ರಪತಿಯಾದ ಸಿಪಿ ರಾಧಾಕೃಷ್ಣನ್ ಪಡೆದ ಮತವೆಷ್ಟು ಗೊತ್ತಾ

ಹುಲಿ ಸೆರೆಯಾಗಬೇಕಾದ ಭೋನಿನಲ್ಲಿ ಅಧಿಕಾರಿಗಳು ದಿಗ್ಭಂದನ, ಯಾಕೆ ಗೊತ್ತಾ

ಮನಿ ಲ್ಯಾಂಡಿಂಗ್ ತನಿಖೆ‌‌ ಎಂದು ಮಾಜಿ ಶಾಸಕ ಗುಂಡಪ್ಪ ವಕೀಲ್‌ಗೆ ₹30.99 ಲಕ್ಷ ದೋಖಾ

ರಾಹುಲ್ ಗಾಂಧಿ ಬ್ರಿಟಿಷ್ ಪ್ರಜೆ ಎಂದ ಕರ್ನಾಟಕ ಬಿಜೆಪಿ ಕಾರ್ಯಕರ್ತನ ಹೇಳಿಕೆ ದಾಖಲು

ನೇಪಾಳ ಕೊತ ಕೊತ: ಮಾಜಿ ಪ್ರಧಾನಿ ಮನೆಗೆ ಹಚ್ಚಿದ ಬೆಂಕಿಯಿಂದ ಪತ್ನಿ ಸಾವು

ಮುಂದಿನ ಸುದ್ದಿ
Show comments