Webdunia - Bharat's app for daily news and videos

Install App

ಹಂಪಿ ಉತ್ಸವಕ್ಕೆ ರೂವಾರಿ ಎಂ.ಪಿ. ಪ್ರಕಾಶ್

Webdunia
ಶುಕ್ರವಾರ, 4 ನವೆಂಬರ್ 2016 (16:52 IST)
ಹಂಪಿ ಉತ್ಸವಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಜಿ ಉಪಮುಖ್ಯಮಂತ್ರಿ ಎಂ.ಪಿ. ಪ್ರಕಾಶ್ ಅವರನ್ನು ನೆನಪಿಸಿಕೊಂಡರು. 
 
ಹಂಪಿ ಉತ್ಸವದ ರೂವಾರಿಯಾಗಿರುವ ಪ್ರಕಾಶ್ ಮತ್ತು ನಾನು 1983ರಲ್ಲಿ ಒಟ್ಟಿಗೆ ರಾಜಕೀಯ ಪ್ರವೇಶಿಸಿದೆವು. ಹೂವಿನ ಹಡಗಲಿ ಕ್ಷೇತ್ರದಿಂದ ವಿಧಾನಸಭೆ ಪ್ರವೇಶಿಸಿದ ಅವರು ಸಚಿವರಾಗಿ, ಉಪಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಿದ್ದರು. ಕಲೆ ಮತ್ತು ಸಾಹಿತ್ಯದಲ್ಲಿ ಅಪಾರ ಆಸಕ್ತಿ ಹೊಂದಿದ್ದ ಅವರು ನಾನು ಹಣಕಾಸು ಸಚಿವನಾಗಿದ್ದ ಸಮಯದಲ್ಲಿ ಮೈಸೂರು ದಸರಾ ಮಾದರಿಯಲ್ಲಿ ಹಂಪಿ ಉತ್ಸವವನ್ನು ಪ್ರಾರಂಭಿಸಬೇಕು ಎಂಬ ಪ್ರಸ್ತಾಪವನ್ನಿಟ್ಟಿದ್ದರು ಎಂದು ಸಿಎಂ ಹಳೆಯ ದಿನಗಳನ್ನು ಸ್ಮರಿಸಿಕೊಂಡರು.
 
ಅವರ ಪ್ರಸ್ತಾಪಕ್ಕೆ ನಾನು ಹಣಕಾಸು ಒದಗಿಸುವ ಭರವಸೆಯನ್ನು ನಾನಿತ್ತೆ. ಅವರಿಂದಲೇ ಹಂಪಿ ಉತ್ಸವ ಪ್ರಾರಂಭವಾಯ್ತು. ಕಳೆದ ವರ್ಷ ಭೀಕರ ಬರಗಾಲವಿದ್ದುದರಿಂದ ಉತ್ಸವವನ್ನು ಆಚರಿಸಲಿಲ್ಲ. ಈ ವರ್ಷವೂ ಬರಗಾಲ ಒಕ್ಕರಿಸಿಕೊಂಡಿದೆ. ಆದರೆ ರಾಜ್ಯದ ಕಲೆ, ಸಾಹಿತ್ಯ , ಸಂಸ್ಕೃತಿಯನ್ನು ಪೋಷಿಸಿಕೊಂಡು ಹೋಗಬೇಕಿರುವುದು ನಮ್ಮ ಕರ್ತವ್ಯವಾಗಿರುವುದರಿಂದ ಉತ್ಸವವನ್ನು ಆಚರಿಸಲಾಗುತ್ತದೆ ಎಂದಿದ್ದಾರೆ ಸಿಎಂ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಸಿದ್ದರಾಮಯ್ಯ ಇಲ್ಲದಿದ್ದರೆ ನಾನಿಲ್ಲ: ಕೆಎನ್ ರಾಜಣ್ಣ

ವಿಮಾನ ದುರಂತವಾಗಿ ವಾರ ಕಳೆಯುವಷ್ಟರಲ್ಲೇ ಏರ್ ಇಂಡಿಯಾ ಸಿಬ್ಬಂದಿಗಳ ಪಾರ್ಟಿ: ವಿಡಿಯೋ

ಮಲೆ ಮಹದೇಶ್ವರ ಬೆಟ್ಟ: ಹುಲಿಗಳಿಗೆ ವಿಷ ಪ್ರಾಷನ ಮಾಡಿದ ಇಬ್ಬರು ಕೊನೆಗೂ ಬಂಧನ

Gold Price: ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments