ಅರವಿಂದ್ ಕೇಜ್ರಿವಾಲ್ ಜೈಲಿಂದ್ದ ಹೊರಬರುತ್ತಿದ್ದ ಹಾಗೇ ಸತ್ಯಮೇವ ಜಯತೆ ಎಂದ ಸಿಎಂ ಸಿದ್ದರಾಮಯ್ಯ

Sampriya
ಶುಕ್ರವಾರ, 13 ಸೆಪ್ಟಂಬರ್ 2024 (18:44 IST)
ಬೆಂಗಳೂರು:  ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿ ಜೈಲಿನಿಂದ ಬಿಡುಗಡೆಗೊಳಿಸಿದ ಸುಪ್ರೀಂಕೋರ್ಟ್ ಆದೇಶ ದೇಶದ ನ್ಯಾಯಾಂಗದ ಮೇಲಿನ ನಮ್ಮೆಲ್ಲರ ನಂಬಿಕೆಯನ್ನು ಇನ್ನಷ್ಟು ದೃಢೀಕರಿಸಿದೆ. ಸತ್ಯ ಮತ್ತು ನ್ಯಾಯದ ಪರವಾಗಿ ಹೋರಾಡುತ್ತಿರುವವರೆಲ್ಲರಿಗೂ ಈ ಆದೇಶ ಭರವಸೆ ಹುಟ್ಟಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್ ಹಂಚಿಕೊಂಡಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲುಪಾಲಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂಕೋರ್ಟ್​ ಜಾಮೀನು ಮಂಜೂರು ಮಾಡಿದೆ. 6 ದಿನಗಳ ಬಳಿಕ ಕೇಜ್ರಿವಾಲ್‌ ಅವರು ಜೈಲಿನಿಂದ ಹೊರಬರುತ್ತಿದ್ದಾರೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಹಂಚಿ, ಸತ್ಯಮೇವ ಜಯತೆ ಎಂದು ಬರೆದುಕೊಂಡಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್   ಅವರಿಗೆ ಜಾಮೀನು ನೀಡಿ ಜೈಲಿನಿಂದ ಬಿಡುಗಡೆಗೊಳಿಸಿದ ಸುಪ್ರೀಂಕೋರ್ಟ್ ಆದೇಶ ದೇಶದ ನ್ಯಾಯಾಂಗದ ಮೇಲಿನ ನಮ್ಮೆಲ್ಲರ ನಂಬಿಕೆಯನ್ನು ಇನ್ನಷ್ಟು ದೃಢೀಕರಿಸಿದೆ. ಸತ್ಯ ಮತ್ತು ನ್ಯಾಯದ ಪರವಾಗಿ ಹೋರಾಡುತ್ತಿರುವವರೆಲ್ಲರಿಗೂ ಈ ಆದೇಶ ಭರವಸೆ ಹುಟ್ಟಿಸಿದೆ.

ಸುಪ್ರೀಂಕೋರ್ಟ್ ನ ಈ ಆದೇಶ ಸಾಂವಿಧಾನಿಕ ಸಂಸ್ಥೆಗಳನ್ನು ತಮ್ಮ ರಾಜಕೀಯ ದ್ವೇಷ ಸಾಧನೆಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವ  ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಕೊಟ್ಟ ತಪರಾಕಿಯಾಗಿದೆ. ದ್ವೇಷದ ರಾಜಕಾರಣಕ್ಕೆ ಇಳಿದಿರುವ ನರೇಂದ್ರಮೋದಿ ನೇತೃತ್ವದ ಸರ್ಕಾರ ನ್ಯಾಯಾಲಯದ ಈ ಆದೇಶದಿಂದಾದರೂ ಪಾಠ ಕಲಿತು ಎಚ್ಚೆತ್ತುಕೊಳ್ಳಲಿ.

ಅಂತಿಮವಾಗಿ ಸತ್ಯವೇ ಗೆಲ್ಲುವುದು, ನ್ಯಾಯವೇ ಬಾಳುವುದು.
ಸತ್ಯಮೇವ ಜಯತೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments