Webdunia - Bharat's app for daily news and videos

Install App

ಅಲ್ಪಸಂಖ್ಯಾತರಿಗೆ ಅನುದಾನ ಕೊಟ್ಟಿದ್ದಕ್ಕೆ ಹಲಾಲ್ ಎಂದ ಬಿಜೆಪಿವರಿಗೆ ಮಾನ ಮರ್ಯಾದೆ ಇಲ್ಲ ಎಂದ ಸಿದ್ದರಾಮಯ್ಯ

Krishnaveni K
ಶನಿವಾರ, 8 ಮಾರ್ಚ್ 2025 (11:36 IST)
ಬೆಂಗಳೂರು: ಕರ್ನಾಟಕ ಬಜೆಟ್ ನಿನ್ನೆ ಘೋಷಣೆಯಾಗಿದ್ದು ಈ ಬಜೆಟ್ ನಲ್ಲಿ ಮಸ್ಲಿಂ ಸಮುದಾಯದವರಿಗೆ ಅನುದಾನ ಕೊಟ್ಟಿದ್ದಕ್ಕೆ ಬಿಜೆಪಿ ಹಲಾಲ್ ಬಜೆಟ್ ಎಂದು ಟೀಕಿಸಿದೆ. ಈ ರೀತಿ ಟೀಕಿಸಿದ ಬಿಜೆಪಿಯವರಿಗೆ ಮಾನ ಮರ್ಯಾದೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಬಜೆಟ್ ನಲ್ಲಿ ಅಲ್ಪ ಸಂಖ್ಯಾತರಿಗೆ ಹಲವು ಅನುದಾನಗಳನ್ನು ನೀಡಲಾಗಿದೆ. ವಿಶೇಷವಾಗಿ ಮುಸ್ಲಿಮರಿಗೆ ವಿವಾಹಕ್ಕೆ ಸಹಾಯಧನ, ಕಾಲೇಜುಗಳು, ಉರ್ದು ಶಾಲೆಗಳ ಆಧುನೀಕರಣ, ಸರ್ಕಾರಿ ಕಾಮಗಾರಿಯಲ್ಲಿ ಮೀಸಲಾತಿ ನೀಡಲಾಗಿದೆ.

ಈ ಅನುದಾನಗಳ ಬಗ್ಗೆ ಬಿಜೆಪಿ ಕಟು ಟೀಕೆ ನಡೆಸಿದೆ. ಇದು ಕಾಂಗ್ರೆಸ್ ನ ಓಲೈಕೆ ರಾಜಕಾರಣದ ಪರಮಾವಧಿ ಎಂದಿದೆ. ಅಲ್ಲದೆ, ಇದು ಕರ್ನಾಟಕ ಬಜೆಟ್ ಅಲ್ಲ, ಹಲಾಲ್ ಬಜೆಟ್ ಎಂದು ಟ್ವೀಟ್ ಮಾಡಿ ಟೀಕೆ ಮಾಡಿತ್ತು.

ಇದರ ಬಗ್ಗೆ ಈಗ ಸಿಎಂ ಟ್ವೀಟ್ ಮೂಲಕವೇ ಪ್ರತಿಕ್ರಿಯಿಸಿದ್ದು, ಕರ್ನಾಟಕದಲ್ಲಿ ಅಲ್ಪ ಸಂಖ್ಯಾತರು ಎಂದರೆ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನರು, ಬೌದ್ಧರು ಎಲ್ಲಾ ಸಮುದಾಯ ಬರುತ್ತದೆ. ರಾಜ್ಯದ ಬಜೆಟ್ ಗಾತ್ರ 4.09 ಲಕ್ಷ ಕೋಟಿ. ಇದರಲ್ಲಿ ಅಲ್ಪ ಸಂಖ್ಯಾತರಿಗೆ ಕೊಟ್ಟಿದ್ದು 4,500 ಕೋಟಿ ಮಾತ್ರ. ಇದನ್ನು ಹಲಾಲ್ ಬಜೆಟ್, ಓಲೈಕ್ ಬಜೆಟ್ ಎನ್ನುವ ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಎಂದಿದ್ದರು. ಇದಕ್ಕೆ ಸಾಕಷ್ಟು ಕಾಮೆಂಟ್ ಗಳು ಬಂದಿವೆ. ಉರ್ದು ಶಾಲೆಗಳಿಗೆ ಕೊಟ್ಟಿದ್ದು ಓಲೈಕೆ ಅಲ್ಲದೆ ಮತ್ತಿನ್ನೇನು, ನೀವು ಅಲ್ಪಸಂಖ್ಯಾತರು ಎಂದು ಹೇಳಿದರೂ ಅತೀ ಹೆಚ್ಚು ಲಾಭ ಪಡೆಯುವುದು ಮುಸ್ಲಿಮರೇ ಎನ್ನುವುದು ಎಲ್ಲರಿಗೂ ಗೊತ್ತು ಎಂದು ಹಲವರು ಕಾಮೆಂಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಮಾವೋವಾದಿ ಹತ್ಯೆ

ಮದ್ಯದ ಬೆಲೆ ಕೇಳಿಯೇ ನಶೆ ಏರುವಂತಾಗಿದೆ: ಬಿಜೆಪಿ ವ್ಯಂಗ್ಯ

Suhas Shetty Case: ಹತ್ಯೆ ಹಿಂದೆ ಬಜ್ಪೆ ಹೆಡ್‌ ಕಾನ್‌ಸ್ಟೇಬಲ್‌ ಭಾಗಿಯಾಗಿರುವ ಶಂಕೆ

Suhas Shetty Case: ಯುಟಿ ಖಾದರ್ ಸ್ಪೀಕರ್‌ ಆಗಿರುವವರೆಗೆ ಸಾವಿಗೆ ನ್ಯಾಯ ಸಿಗುವ ನಂಬಿಕೆಯಿಲ್ಲ

ಮುಂದಿನ ಸುದ್ದಿ
Show comments