Webdunia - Bharat's app for daily news and videos

Install App

ಅಲ್ಪಸಂಖ್ಯಾತರಿಗೆ ಅನುದಾನ ಕೊಟ್ಟಿದ್ದಕ್ಕೆ ಹಲಾಲ್ ಎಂದ ಬಿಜೆಪಿವರಿಗೆ ಮಾನ ಮರ್ಯಾದೆ ಇಲ್ಲ ಎಂದ ಸಿದ್ದರಾಮಯ್ಯ

Krishnaveni K
ಶನಿವಾರ, 8 ಮಾರ್ಚ್ 2025 (11:36 IST)
ಬೆಂಗಳೂರು: ಕರ್ನಾಟಕ ಬಜೆಟ್ ನಿನ್ನೆ ಘೋಷಣೆಯಾಗಿದ್ದು ಈ ಬಜೆಟ್ ನಲ್ಲಿ ಮಸ್ಲಿಂ ಸಮುದಾಯದವರಿಗೆ ಅನುದಾನ ಕೊಟ್ಟಿದ್ದಕ್ಕೆ ಬಿಜೆಪಿ ಹಲಾಲ್ ಬಜೆಟ್ ಎಂದು ಟೀಕಿಸಿದೆ. ಈ ರೀತಿ ಟೀಕಿಸಿದ ಬಿಜೆಪಿಯವರಿಗೆ ಮಾನ ಮರ್ಯಾದೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಬಜೆಟ್ ನಲ್ಲಿ ಅಲ್ಪ ಸಂಖ್ಯಾತರಿಗೆ ಹಲವು ಅನುದಾನಗಳನ್ನು ನೀಡಲಾಗಿದೆ. ವಿಶೇಷವಾಗಿ ಮುಸ್ಲಿಮರಿಗೆ ವಿವಾಹಕ್ಕೆ ಸಹಾಯಧನ, ಕಾಲೇಜುಗಳು, ಉರ್ದು ಶಾಲೆಗಳ ಆಧುನೀಕರಣ, ಸರ್ಕಾರಿ ಕಾಮಗಾರಿಯಲ್ಲಿ ಮೀಸಲಾತಿ ನೀಡಲಾಗಿದೆ.

ಈ ಅನುದಾನಗಳ ಬಗ್ಗೆ ಬಿಜೆಪಿ ಕಟು ಟೀಕೆ ನಡೆಸಿದೆ. ಇದು ಕಾಂಗ್ರೆಸ್ ನ ಓಲೈಕೆ ರಾಜಕಾರಣದ ಪರಮಾವಧಿ ಎಂದಿದೆ. ಅಲ್ಲದೆ, ಇದು ಕರ್ನಾಟಕ ಬಜೆಟ್ ಅಲ್ಲ, ಹಲಾಲ್ ಬಜೆಟ್ ಎಂದು ಟ್ವೀಟ್ ಮಾಡಿ ಟೀಕೆ ಮಾಡಿತ್ತು.

ಇದರ ಬಗ್ಗೆ ಈಗ ಸಿಎಂ ಟ್ವೀಟ್ ಮೂಲಕವೇ ಪ್ರತಿಕ್ರಿಯಿಸಿದ್ದು, ಕರ್ನಾಟಕದಲ್ಲಿ ಅಲ್ಪ ಸಂಖ್ಯಾತರು ಎಂದರೆ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನರು, ಬೌದ್ಧರು ಎಲ್ಲಾ ಸಮುದಾಯ ಬರುತ್ತದೆ. ರಾಜ್ಯದ ಬಜೆಟ್ ಗಾತ್ರ 4.09 ಲಕ್ಷ ಕೋಟಿ. ಇದರಲ್ಲಿ ಅಲ್ಪ ಸಂಖ್ಯಾತರಿಗೆ ಕೊಟ್ಟಿದ್ದು 4,500 ಕೋಟಿ ಮಾತ್ರ. ಇದನ್ನು ಹಲಾಲ್ ಬಜೆಟ್, ಓಲೈಕ್ ಬಜೆಟ್ ಎನ್ನುವ ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಎಂದಿದ್ದರು. ಇದಕ್ಕೆ ಸಾಕಷ್ಟು ಕಾಮೆಂಟ್ ಗಳು ಬಂದಿವೆ. ಉರ್ದು ಶಾಲೆಗಳಿಗೆ ಕೊಟ್ಟಿದ್ದು ಓಲೈಕೆ ಅಲ್ಲದೆ ಮತ್ತಿನ್ನೇನು, ನೀವು ಅಲ್ಪಸಂಖ್ಯಾತರು ಎಂದು ಹೇಳಿದರೂ ಅತೀ ಹೆಚ್ಚು ಲಾಭ ಪಡೆಯುವುದು ಮುಸ್ಲಿಮರೇ ಎನ್ನುವುದು ಎಲ್ಲರಿಗೂ ಗೊತ್ತು ಎಂದು ಹಲವರು ಕಾಮೆಂಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments