ದೇವತೆಗಳೇ ಸಾರಾಯಿ ಕುಡಿತಿದ್ರು ಆದ್ರೆ ನಾವು ಹಾಗೆ ಹೇಳಲ್ಲ: ಸಿಎಂ ಸಿದ್ದರಾಮಯ್ಯ

Krishnaveni K
ಗುರುವಾರ, 21 ನವೆಂಬರ್ 2024 (16:14 IST)
ನವದೆಹಲಿ: ಇಂದು ದೆಹಲಿಯಲ್ಲಿ ನಂದಿನಿ ಉತ್ಪನ್ನಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ ಹಿಂದಿನ ಕಾಲದಲ್ಲಿ ದೇವತೆಗಳೇ ಸಾರಾಯಿ ಕುಡಿತಿದ್ರು ಎಂದಿದ್ದಾರೆ. ಅವರ ಈ ಹೇಳಿಕೆ ವಿವಾದಕ್ಕೆ ಕಾರಣವಾಗುವ ಸಾಧ್ಯತೆಯಿದೆ.

ಇಂದು ದೆಹಲಿಯ ಅಶೋಕ ಹೋಟೆಲ್ ನಲ್ಲಿ ಸಿಎಂ ಸಿದ್ದರಾಮಯ್ಯ ನಂದಿನಿ ಉತ್ಪನ್ನಗಳನ್ನು ಬಿಡುಗಡೆ ಮಾಡಿದ್ದಾರೆ. ಇನ್ನು ಮುಂದೆ ದೆಹಲಿಯಲ್ಲೂ ನಂದಿನಿ ಉತ್ಪನ್ನಗಳು ಲಭ್ಯವಾಗಲಿದೆ. ಈ ವೇಳೆ ಮಾತನಾಡಿದ ಅವರು ಹಿಂದಿನ ಕಾಲದಲ್ಲಿ ದೇವತೆಗಳೂ ಸಾರಾಯಿ ಕುಡಿತಿದ್ದರು ಎಂದಿದ್ದಾರೆ.

ಆದರೆ ನಾವು ನಿಮಗೆ ಸಾರಾಯಿ ಕುಡಿಯಿರಿ ಎನ್ನಲ್ಲ. ಹಾಲು ಕುಡಿಯಿರಿ. ಹಾಲು ಕಂಪ್ಲೀಟ್ ಫುಡ್ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು ನಂದಿನಿ ಉತ್ಪನ್ನಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಕುರಿಯನ್ ಹಾಲು ಉತ್ಪಾದಕರ ಸಂಘಟನೆ ಮಾಡಿದ ಗುಜರಾತ್ ದೇಶದಲ್ಲೇ ಹಾಲು ಉತ್ಪಾದನೆಯಲ್ಲಿ ನಂ.1 ಸ್ಥಾನದಲ್ಲಿದೆ. ನಾವು ಎರಡನೇ ಸ್ಥಾನದಲ್ಲಿದ್ದೇವೆ.

ನಾನೂ ಈ ಹಿಂದೆ ಪಶು ಸಂಗೋಪನಾ ಇಲಾಖೆಯ ಸಚಿವನಾಗಿದ್ದೆ. ಪಶು ಸಂಗೋಪನೆ ಎನ್ನುವುದು ನಮ್ಮ ರೈತರ ಉಪ ಕಸುಬು. ಕರ್ನಾಟಕ 1 ಕೋಟಿ ಕೆಜಿಯಷ್ಟು ಹಾಲು ಉತ್ಪಾದನೆ ಮಾಡುತ್ತಿದೆ. ಪ್ರತಿ ದಿನ 31 ಕೋಟಿ ಹಣ ಹಳ್ಳಿಗೆ ಹೋಗುತ್ತಿದೆ. ರಾಜ್ಯ ಸರ್ಕಾರದಿಂದ 5 ರೂ. ನೀಡಲಾಗುತ್ತಿದೆ ಎಂದಿದ್ದಾರೆ.

ಹಾಲು ಸಂಪೂರ್ಣ ಆಹಾರ. ದೇವತೆಗಳೇ ಸಾರಾಯಿ ಕುಡಿತಿದ್ರು. ಆದರೆ ನಾವು ಹಾಗೆ ಹೇಳಲ್ಲ. ಜನ ಹೆಚ್ಚು ಪ್ರಮಾಣದಲ್ಲಿ ಹಾಲು ಉಪಯೋಗಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ವಿಐಪಿ ಟ್ರೀಟ್ಮೆಂಟ್: ಮಾಧ್ಯಮಗಳ ಪ್ರಶ್ನೆಗೆ ಸಿಎಂ ಏನು ಹೇಳಿದ್ರು

ಕೆಲವರು ಮುಳುಗುವುದಕ್ಕೆ ಪ್ರಾಕ್ಟೀಸ್ ಮಾಡ್ತಿದ್ದಾರೆ: ರಾಹುಲ್ ಗಾಂಧಿಗೆ ಮೋದಿ ಟಾಂಗ್

ರಾಷ್ಟ್ರಪತಿ ಜೊತೆ ವಿ ಸೋಮಣ್ಣ ಸೌತ್ ಆಫ್ರಿಕಾ ಪ್ರವಾಸ: ಮೋದಿಗೆ ಥ್ಯಾಂಕ್ಸ್ ಹೇಳಿದ ಸಚಿವ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಬ್ಬು ಬೆಳೆಗಾರರ ಸಂಧಾನದ ಬಳಿಕ ಸ್ವೀಟ್ ಹಂಚಿ ಸಂಭ್ರಮಿಸಿದ ವಿಜಯೇಂದ್ರ

ಮುಂದಿನ ಸುದ್ದಿ
Show comments