Webdunia - Bharat's app for daily news and videos

Install App

ದೇವತೆಗಳೇ ಸಾರಾಯಿ ಕುಡಿತಿದ್ರು ಆದ್ರೆ ನಾವು ಹಾಗೆ ಹೇಳಲ್ಲ: ಸಿಎಂ ಸಿದ್ದರಾಮಯ್ಯ

Krishnaveni K
ಗುರುವಾರ, 21 ನವೆಂಬರ್ 2024 (16:14 IST)
ನವದೆಹಲಿ: ಇಂದು ದೆಹಲಿಯಲ್ಲಿ ನಂದಿನಿ ಉತ್ಪನ್ನಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ ಹಿಂದಿನ ಕಾಲದಲ್ಲಿ ದೇವತೆಗಳೇ ಸಾರಾಯಿ ಕುಡಿತಿದ್ರು ಎಂದಿದ್ದಾರೆ. ಅವರ ಈ ಹೇಳಿಕೆ ವಿವಾದಕ್ಕೆ ಕಾರಣವಾಗುವ ಸಾಧ್ಯತೆಯಿದೆ.

ಇಂದು ದೆಹಲಿಯ ಅಶೋಕ ಹೋಟೆಲ್ ನಲ್ಲಿ ಸಿಎಂ ಸಿದ್ದರಾಮಯ್ಯ ನಂದಿನಿ ಉತ್ಪನ್ನಗಳನ್ನು ಬಿಡುಗಡೆ ಮಾಡಿದ್ದಾರೆ. ಇನ್ನು ಮುಂದೆ ದೆಹಲಿಯಲ್ಲೂ ನಂದಿನಿ ಉತ್ಪನ್ನಗಳು ಲಭ್ಯವಾಗಲಿದೆ. ಈ ವೇಳೆ ಮಾತನಾಡಿದ ಅವರು ಹಿಂದಿನ ಕಾಲದಲ್ಲಿ ದೇವತೆಗಳೂ ಸಾರಾಯಿ ಕುಡಿತಿದ್ದರು ಎಂದಿದ್ದಾರೆ.

ಆದರೆ ನಾವು ನಿಮಗೆ ಸಾರಾಯಿ ಕುಡಿಯಿರಿ ಎನ್ನಲ್ಲ. ಹಾಲು ಕುಡಿಯಿರಿ. ಹಾಲು ಕಂಪ್ಲೀಟ್ ಫುಡ್ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು ನಂದಿನಿ ಉತ್ಪನ್ನಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, ಕುರಿಯನ್ ಹಾಲು ಉತ್ಪಾದಕರ ಸಂಘಟನೆ ಮಾಡಿದ ಗುಜರಾತ್ ದೇಶದಲ್ಲೇ ಹಾಲು ಉತ್ಪಾದನೆಯಲ್ಲಿ ನಂ.1 ಸ್ಥಾನದಲ್ಲಿದೆ. ನಾವು ಎರಡನೇ ಸ್ಥಾನದಲ್ಲಿದ್ದೇವೆ.

ನಾನೂ ಈ ಹಿಂದೆ ಪಶು ಸಂಗೋಪನಾ ಇಲಾಖೆಯ ಸಚಿವನಾಗಿದ್ದೆ. ಪಶು ಸಂಗೋಪನೆ ಎನ್ನುವುದು ನಮ್ಮ ರೈತರ ಉಪ ಕಸುಬು. ಕರ್ನಾಟಕ 1 ಕೋಟಿ ಕೆಜಿಯಷ್ಟು ಹಾಲು ಉತ್ಪಾದನೆ ಮಾಡುತ್ತಿದೆ. ಪ್ರತಿ ದಿನ 31 ಕೋಟಿ ಹಣ ಹಳ್ಳಿಗೆ ಹೋಗುತ್ತಿದೆ. ರಾಜ್ಯ ಸರ್ಕಾರದಿಂದ 5 ರೂ. ನೀಡಲಾಗುತ್ತಿದೆ ಎಂದಿದ್ದಾರೆ.

ಹಾಲು ಸಂಪೂರ್ಣ ಆಹಾರ. ದೇವತೆಗಳೇ ಸಾರಾಯಿ ಕುಡಿತಿದ್ರು. ಆದರೆ ನಾವು ಹಾಗೆ ಹೇಳಲ್ಲ. ಜನ ಹೆಚ್ಚು ಪ್ರಮಾಣದಲ್ಲಿ ಹಾಲು ಉಪಯೋಗಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments