Webdunia - Bharat's app for daily news and videos

Install App

ರಾಹುಲ್ ಗಾಂಧಿ ಒಬ್ಬ ಮಹಾನ್ ದೇಶ ಭಕ್ತ ಅರ್ಥ ಆಯ್ತಾ ಅಂದ್ರು ಸಿಎಂ ಸಿದ್ದರಾಮಯ್ಯ

Krishnaveni K
ಶುಕ್ರವಾರ, 6 ಡಿಸೆಂಬರ್ 2024 (15:06 IST)
ಬೆಂಗಳೂರು: ರಾಹುಲ್ ಗಾಂಧಿಯನ್ನು ದೇಶದ್ರೋಹಿ ಎಂದ ಬಿಜೆಪಿಗೆ ಇಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ರಾಹುಲ್ ಗಾಂಧಿ ಒಬ್ಬ ಮಹಾನ್ ದೇಶಭಕ್ತ ಎಂದಿದ್ದಾರೆ.

ರಾಹುಲ್ ಗಾಂಧಿ ವಿದೇಶೀ ಶಕ್ತಿಗಳೊಂದಿಗೆ ಕೈ ಜೋಡಿಸಿಕೊಂಡು ದೇಶದ್ರೋಹಿ ಚಟುವಟಿಕೆ ಮಾಡುತ್ತಿದ್ದಾರೆ ಎಂದು ಬಿಜೆಪಿಯ ಶಶಿಕಾಂತ್ ದುಬೆ ಆರೋಪಿಸಿದ್ದರು. ಈ ಬಗ್ಗೆ ಸಂಸತ್ತಿನಲ್ಲಿ ಕಾಂಗ್ರೆಸ್ ಭಾರೀ ಆಕ್ರೋಶ ಹೊರಹಾಕಿತ್ತು. ಇದೀಗ ಬಿಜೆಪಿ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

‘ರಾಹುಲ್ ಗಾಂದಿ ಒಬ್ಬ ಮಹಾನ್ ದೇಶ ಭಕ್ತ ಅರ್ಥ ಆಯ್ತಾ? ಅವರು ಎಲ್ಲರಿಗೂ ಸಮಾನತೆ ಅವಕಾಶಗಳು ಸಿಗಬೇಕು ಎಂದು ಹೋರಾಟ ಮಾಡ್ತಿದ್ದಾರೆ. ಸಂವಿಧಾನದ ರಕ್ಷಣೆಯಾಗಬೇಕು ಎಂದು ಹೋರಾಟ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ರಕ್ಷಣೆಯಾಗಬೇಕು ಎಂದು ಹೋರಾಟ ಮಾಡುತ್ತಿರುವ ವ್ಯಕ್ತಿ. ಅಂತಹ ವ್ಯಕ್ತಿಯನ್ನು ದೇಶದ್ರೋಹಿ ಎಂದು ಕರೆದರೆ ಯಾರು ಹಾಗೆ ಹೇಳುತ್ತಾರೋ ಅವರೇ ನಿಜವಾದ ದೇಶದ್ರೋಹಿಗಳು’ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಗೌತಮ್ ಅದಾನಿ ವಿಚಾರದಲ್ಲಿ ಸಂಸತ್ತಿನಲ್ಲಿ ಗದ್ದಲವೆಬ್ಬಿಸುತ್ತಿರುವ ವಿಪಕ್ಷಗಳಿಗೆ ಟಾಂಗ್ ಕೊಡುವಾಗ ಸಂಬಿತ್ ಪಾತ್ರಾ, ರಾಹುಲ್ ಗಾಂಧಿಗೆ ಶತಕೋಟ್ಯಾಧೀಶ ಜಾರ್ಜ್ ಸೊರೊಸ್ ನಂಟು ಹೊಂದಿರುವ ಸಂಘಟಿತ ಅಪರಾಧ ಮತ್ತು ಭ್ರಷ್ಟಾಚಾರ ರಿಪೋರ್ಟಿಂಗ್ ಪ್ರಾಜೆಕ್ಟ್ ಪ್ರಕಟಿಸಿದ ವರದಿ ಆಧಾರದ ಮೇಲೆ ವಿಪಕ್ಷಗಳು ಸಂಸತ್ ಕಲಾಪವನ್ನು ಹಾಳುಮಾಡುತ್ತಿವೆ ಎಂದಿದ್ದರು. ಈ ಗದ್ದಲದ ವೇಳೆ ರಾಹುಲ್ ಒಬ್ಬ ದೇಶದ್ರೋಹಿ ಎಂದು ಬಿಜೆಪಿ ಆರೋಪಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments