Webdunia - Bharat's app for daily news and videos

Install App

ಸಂವಿಧಾನ ಬದಲಾದರೆ ರಕ್ತಪಾತವಾಗುತ್ತದೆ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

Krishnaveni K
ಸೋಮವಾರ, 11 ಮಾರ್ಚ್ 2024 (13:59 IST)
ಬೆಂಗಳೂರು: ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಸಂವಿಧಾನ ಬದಲಾವಣೆ ಹೇಳಿಕೆ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಸಂವಿಧಾನ ಬದಲಾಯಿಸಿದರೆ ದೇಶದಲ್ಲಿ ರಕ್ತಪಾತವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ 400 ಪ್ಲಸ್ ಸ್ಥಾನ ಗೆದ್ದರೆ ಸಂವಿಧಾನ ಬದಲಾಯಿಸಬಹುದು ಎಂದು ಅನಂತ್ ಕುಮಾರ್ ಹೆಗಡೆ ಹೇಳಿಕೆ ನೀಡಿದ್ದರು. ಅವರ ಈ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ. ಸ್ವತಃ ಬಿಜೆಪಿ ಹೈಕಮಾಂಡ್ ಅನಂತ್ ಕುಮಾರ್ ಗೆ ವಿವರಣೆ ನೀಡಲು ಸೂಚಿಸಿದೆ.

ಇದೀಗ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರತಿಕ್ರಿಯಿಸಿದ್ದು ‘ಸಂವಿಧಾನ ಬದಲಾವಣೆ ಮಾಡುವುದು ಬಿಜೆಪಿಯವರ ರಹಸ್ಯ ಅಜೆಂಡಾ. ಸಂವಿಧಾನಕ್ಕೆ ಅನಗತ್ಯ ತಿದ್ದುಪಡಿ ತರಲಾಗಿದೆ. ಅವುಗಳನ್ನು ಸರಿಪಡಿಸಬೇಕು.ಅದಕ್ಕೆ ಮೂರನೇ ಎರಡರಷ್ಟು ಬಹುಮತ ಬೇಕು ಎಂದು ಹೆಗಡೆಯವರು ಹೇಳಿದ್ದಾರೆ. ಅವರು ಜನತೆಯಲ್ಲಿ ಬಹುಮತ ಕೇಳಿರುವುದು ಜನರ ಉದ್ದಾರಕ್ಕಾಗಿ ಅಲ್ಲ. ಮನುವಾದಿತನವನ್ನು ಸಮರ್ಥನೆ ಮಾಡಿಕೊಳ್ಳುವುದು, ಮನುಸಂಸ್ಕೃತಿಗೆ ಅನುಗುಣವಾಗಿ ಸಂವಿಧಾನ ಇರಬೇಕು ಅನ್ನೋದು ಅವರ ಹಿಡನ್ ಅಜೆಂಡಾ. ಅದಕ್ಕೆ ಇಡೀ ದೇಶದ ಬಡವರು, ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರು ಎಲ್ಲರನ್ನು ಅವರು ವಿರೋಧ ಮಾಡುತ್ತಾರೆ. ಒಂದು ವೇಳೆ ಸಂವಿಧಾನ ಬದಲಾವಣೆ ಮಾಡಿದರೆ ದೇಶದಲ್ಲಿ ರಕ್ತಪಾತವಾಗಲಿದೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಹಿಂದೆ ಕೂಡಾ ಅನಂತ್ ಕುಮಾರ್ ಸಂವಿಧಾನ ಬದಲಾವಣೆ ಹೇಳಿಕೆ ನೀಡಿ ವಿವಾದಕ್ಕೊಳಗಾಗಿದ್ದರು. ಈಗ ಮತ್ತೊಮ್ಮೆ ಅಂತಹದ್ದೇ ವಿವಾದ ಮೈಮೇಲೆಳೆದುಕೊಂಡಿದ್ದಾರೆ. ಈ ಬಾರಿ ಅವರ ಹೇಳಿಕೆ ಬಿಜೆಪಿ ನಾಯಕರ ಕಣ್ಣು ಕೆಂಪಗಾಗಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈ ವಿಷಯಕ್ಕೆ ಪ್ರಧಾನಿ, ಗೃಹ ಸಚಿಚರ ಸದನದಲ್ಲಿ ಉತ್ತರಿಸಬೇಕು: ಮಲ್ಲಿಕಾರ್ಜುನ ಖರ್ಗೆ

ಕಾರು ಚಲಾಯಿಸಿ ವ್ಯಕ್ತಿಯ ಸಾವಿಗೆ ಕಾರಣವಾದ ಅಪ್ರಾಪ್ತ, Deadly Video

ಮಿತವಾದಿ ಹಿಂದೂ ಆಗಿದ್ದೆ, ಇದೀಗ ಜಾಗೃತ ಹಿಂದೂ ಆಗಿ ಬದಲಾಗಿದ್ದೇನೆ: ಕಂಗನಾ ರನೌತ್

ಪೊಲೀಸ್ ಪರೀಕ್ಷೆ ಬಳಿಕ ಮೆಜೆಸ್ಟಿಕ್‌ನಲ್ಲಿ ರೈಲು ಹತ್ತುವಾಗ ಕಂಡ ಆಘಾತಕಾರಿ ವಿಡಿಯೋ ಇಲ್ಲಿದೆ

ಮಂತ್ರಿ ಆಗಕ್ಕೆ ಮಾಜಿ ಮುಖ್ಯ ಮಂತ್ರಿಗಳ ಮಕ್ಕಳೇ ಆಗಬೇಕಾ: ಕಾಂಗ್ರೆಸ್ ಗೆ ಬಿಗ್ ಶಾಕ್ ಕೊಟ್ಟ ಇಬ್ಬರು ಶಾಸಕರು

ಮುಂದಿನ ಸುದ್ದಿ
Show comments