Select Your Language

Notifications

webdunia
webdunia
webdunia
webdunia

ಆಜಾನ್ ಕೇಳಿಸುತ್ತಿದ್ದ ಹಾಗೇ ಭಾಷಣ ನಿಲ್ಲಿಸಿದ ಸಿಎಂ ಸಿದ್ದರಾಮಯ್ಯ

ಆಜಾನ್ ಕೇಳಿಸುತ್ತಿದ್ದ ಹಾಗೇ ಭಾಷಣ ನಿಲ್ಲಿಸಿದ ಸಿಎಂ ಸಿದ್ದರಾಮಯ್ಯ

Sampriya

ಬೆಂಗಳೂರು , ಸೋಮವಾರ, 2 ಸೆಪ್ಟಂಬರ್ 2024 (20:11 IST)
ಬೆಂಗಳೂರು:  ಭಾಷಣದ ವೇಳೆ ಆಜಾನ್ ಕೇಳಿಸುತ್ತಿದ್ದ ಹಾಗೇ ಸಿಎಂ ಸಿದ್ದರಾಮಯ್ಯ ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿ ಮೌನಕ್ಕೆ ಶರಣಾದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ಇಂದು ಬೆಂಗಳೂರಿನ ಶಿವಾಜಿನಗರದಲ್ಲಿ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ಉದ್ಘಾಟಿಸಿದರು.

ಶಿವಾಜಿನಗರದ ಬ್ರಾಡ್ ವೇ ರಸ್ತೆಯಲ್ಲಿ 4 ಕೋಟಿ ವೆಚ್ಚದಲ್ಲಿ 130 ಹಾಸಿಗೆಗಳುಳ್ಳ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗಿದ್ದು, ಇದನ್ನು ಇಂದು ಅಧಿಕೃತವಾಗಿ ಸಿಎಂ, ಡಿಸಿಎಂ ಸೇರಿದಂತೆ ಸಚಿವರು ಶಾಸಕರು ಸೇರಿಕೊಂಡು ಉದ್ಘಾಟಿಸಿದರು.

ಭಾಷಣದ ವೇಳೆ ಆಜಾನ್ ಆಗುತ್ತಿದ್ದ ಹಾಗೇ ಸಿಎಂ ಮೌನಕ್ಕೆ ಶರಣಾದರು.  ​ಆಜಾನ್​ ಮುಗಿಯುವವರೆಗೂ ಅಂದರೆ ಸುಮಾರು ಐದು ನಿಮಿಷಗಳ ಕಾಲ ಏನು ಮಾತನಾಡದೇ ಮೌನಕ್ಕೆ ಶರಣಾಗಿದ್ದಾರೆ. ನಂತರ ​ಆಜಾನ್ ಮುಗಿದ ಬಳಿಕ ಸಿದ್ದರಾಮಯ್ಯನವರು ತಮ್ಮ ಭಾಷಣವನ್ನು ಮುಂದುವರಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಸ್ವಾಮೀಜಿ ಸುದ್ದಿಗೆ ಬಂದ್ರೆ ಮಸೀದಿಗೆ ನುಗ್ಗಿ ಹೊಡೆಯುತ್ತೇವೆ: ಶಾಸಕ ನಿತೇಶ್ ಕುಮಾರ್ ವಿರುದ್ಧ ದೂರು ದಾಖಲು