ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಅಧಿವೇಶನ ಕರೆದು ಎಲ್ಲಾ ಶಾಸಕರ ಒಪ್ಪಿಗೆ ಪಡೆದು ವಿಧಾನಸಭೆಯನ್ನು ವಿಸರ್ಜಿಸಲು ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಭೆಯಲ್ಲಿ ಸುಪ್ರೀಂಕೋರ್ಟ್ ಆದೇಶ ಕುರಿತಂತೆ ಚರ್ಚೆ ನಡೆಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಲ್ಲಾ ಶಾಸಕರು ರಾಜೀನಾಮೆ ನೀಡಲು ಒಪ್ಪಿದಲ್ಲಿ ವಿಧಾಸಭೆ ವಿಸರ್ಜಿಸಲು ನಿರ್ಧಾರಿಸಿದ್ದಾರೆ ಎಂದು ಸಿಎಂ ಆಪ್ತ ಮೂಲಗಳು ತಿಳಿಸಿವೆ.
ಸುಪ್ರೀಂಕೋರ್ಟ್ನಲ್ಲಿ ಇಂದು ನಡೆದ ವಿಚಾರಣೆಯಲ್ಲಿ ಸೆಪ್ಟೆಂಬರ್ 28 ರವರೆಗೆ ತಮಿಳುನಾಡಿಗೆ ಪ್ರತಿನಿತ್ಯ 6 ಸಾವಿರ ಕ್ಯೂಸೆಕ್ ನೀರು ಹರಿಬಿಡುವಂತೆ ಆದೇಶ ನೀಡಿದೆ.
ಸುಪ್ರೀಂಕೋರ್ಟ್ ಆದೇಶದಿಂದ ಕಾವೇರಿ ಕಣಿವೆಯ ರೈತರು ಆಕ್ರೋಶಗೊಂಡಿದ್ದು, ರೈತರ ಪ್ರತಿಭಟನೆ ಯಾವ ಹಂತಕ್ಕೆ ಬೇಕಾದರೂ ತಲುಪುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ