Webdunia - Bharat's app for daily news and videos

Install App

ಕುಂಭಮೇಳ ಸಂಗಮದಲ್ಲಿ ಮಲದ ಬ್ಯಾಕ್ಟೀರಿಯಾ ಇರುವುದು ನಿಜವೇ: ಸಿಎಂ ಯೋಗಿ ಹೇಳಿದ್ದೇನು

Krishnaveni K
ಬುಧವಾರ, 19 ಫೆಬ್ರವರಿ 2025 (16:11 IST)
ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಸಂಗಮ ಸ್ಥಾನದ ನೀರಿನಲ್ಲಿ ಮಲದ ಬ್ಯಾಕ್ಟೀರಿಯಾ ಇದೆ ಎಂಬ ವರದಿಗಳ ಬಗ್ಗೆ ಸಿಎಂ ಯೋಗಿ ಆದಿತ್ಯನಾಥ್ ಪ್ರತಿಕ್ರಿಯೆ ನೀಡಿದ್ದಾರೆ.

ಸಾಕಷ್ಟು ಜನ ಸ್ನಾನ ಮಾಡಿರುವ ತ್ರಿವೇಣಿ ಸಂಗಮದ ನೀರಿನಲ್ಲಿ ಮಲದ ಬ್ಯಾಕ್ಟೀರಿಯಾ ಇದೆ. ಇದು ಕುಡಿಯಲು ಯೋಗ್ಯವಲ್ಲ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಹೇಳಿತ್ತು. ಈ ವರದಿಗಳ ಬೆನ್ನಲ್ಲೇ ಹಲವರು ಆತಂಕಕ್ಕೀಡಾಗಿದ್ದರು.

ಇದೀಗ ಈ ಬಗ್ಗೆ ಪ್ರತಿಕ್ರಿಯಿಸಿರುವ ಯೋಗಿ ಆದಿತ್ಯನಾಥ್, ಗಂಗಾ, ಯಮುನಾ, ಸರಸ್ವತಿ ಸಂಗಮದ ನೀರು ಪವಿತ್ರವಾಗಿದೆ. ಕುಂಭಮೇಳಕ್ಕೆ ಅಪಖ್ಯಾತಿ ತರಲು ಯಾರೋ ಈ ರೀತಿ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಸಂಗಮದ ನೀರು ಸ್ನಾನಕ್ಕೆ ಯೋಗ್ಯವಾಗಿದೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಸನಾತನ ಗಂಗಾ, ಯಮುನಾ, ಸರಸ್ವತಿ ಮಾತೆ ಅಥವಾ ಕುಂಭದ ಬಗ್ಗೆ ಆಧಾರ ರಹಿತ ಆರೋಪ ಮಾಡುವುದು, ನಕಲಿ ವಿಡಿಯೋಗಳನ್ನು ಹರಿಯಬಿಡುವುದು 56 ಕೋಟಿ ಜನರ ನಂಬಿಕೆಯೊಂದಿಗೆ ಚೆಲ್ಲಾಟವಾಡಿದಂತೆ ಎಂದು ಯೋಗಿ ಗುಡುಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments