Webdunia - Bharat's app for daily news and videos

Install App

ನನಗಾಗಿ ವಿಶೇಷ ವ್ಯವಸ್ಥೆ ಮಾಡಬೇಡಿ ಎಂದು ಹುಕುಂ ಹೊರಡಿಸಿದ ಸಿಎಂ ಯೋಗಿ

Webdunia
ಶನಿವಾರ, 3 ಜೂನ್ 2017 (11:07 IST)
ಲಕ್ನೋ: ಇತ್ತೀಚೆಗಷ್ಟೇ ಹುತಾತ್ಮ ಯೋಧನ ಮನೆಗೆ ಭೇಟಿ ನೀಡುವಾಗ ವಿಶೇಷ ವ್ಯವಸ್ಥೆ ಮಾಡಿ ನಂತರ ಅಧಿಕಾರಿಗಳು ಎಲ್ಲವನ್ನೂ ಹೊತ್ತೊಯ್ದ ಪ್ರಕರಣದಿಂದ ಸಾಕಷ್ಟು ಮುಜುಗರಕ್ಕೊಳಗಾದ ಯುಪಿ ಸಿಎಂ ಯೋಗಿ ತಾನು ಭೇಟಿ ಮಾಡುವ ಸ್ಥಳದಲ್ಲಿ ವಿಶೇಷ ವ್ಯವಸ್ಥೆ ಮಾಡಬೇಡಿ ಎಂದು ಆದೇಶಿಸಿದ್ದಾರೆ.

 
‘ನಾನೂ ಒಂದು ಕಾಲದಲ್ಲಿ ನೆಲದ ಮೇಲೆ ಕುಳಿತೇ ಕೆಲಸ ಮಾಡುತ್ತಿದ್ದವನು. ಹಾಗಾಗಿ ನಾನು ಭೇಟಿ ನೀಡುವ ಸ್ಥಳದಲ್ಲಿ ಮೊದಲು ಹೇಗಿತ್ತೋ ಹಾಗೇ ಇರಲಿ. ಅದರ ಹೊರತಾಗಿ ವಿಶೇಷ ವ್ಯವಸ್ಥೆಯನ್ನೇನೂ ಮಾಡಬೇಡಿ’ ಎಂದು ಅಧಿಕಾರಿಗಳಿಗೆ ಹುಕುಂ ಹೊರಡಿಸಿದ್ದಾರೆ.

ಇತ್ತೀಚೆಗೆ ಕಾಶ್ಮೀರದಲ್ಲಿ ಪಾಕ್ ಯೋಧರಿಂದ ಶಿರಚ್ಛೇದಕ್ಕೊಳಗಾದ ಯೋಧ ಪ್ರೇಮ್ ಸಾಗರ್ ಮನೆಗೆ ಸಿಎಂ ಭೇಟಿ ಕೊಡುವಾಗ ಅಧಿಕಾರಿಗಳು, ಸೋಫಾ, ಟಿವಿ, ಎಸಿ ವ್ಯವಸ್ಥೆ ಮಾಡಿದ್ದರು. ಆದರೆ ಸಿಎಂ ನಿರ್ಗಮಿಸುತ್ತಿದ್ದಂತೆ ಎಲ್ಲವನ್ನೂ ಹೊತ್ತೊಯ್ದು ಯೋಧನ ಕುಟುಂಬಕ್ಕೆ ಅಪಮಾನವೆಸಗಿದ್ದರು. ಇದು ಸಾಕಷ್ಟು ಟೀಕೆಗೆ ಗುರಿಯಾಗಿತ್ತು.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments