Select Your Language

Notifications

webdunia
webdunia
webdunia
webdunia

ಅನುರಾಗ್ ತಿವಾರಿ ಅನುಮಾನಾಸ್ಪದ ಸಾವು: ವಿಶೇಷ ತನಿಖಾ ತಂಡ ರಚನೆ

ಅನುರಾಗ್ ತಿವಾರಿ ಅನುಮಾನಾಸ್ಪದ ಸಾವು: ವಿಶೇಷ ತನಿಖಾ ತಂಡ ರಚನೆ
ಲಕ್ನೋ , ಗುರುವಾರ, 18 ಮೇ 2017 (15:20 IST)
ಹಿರಿಯ ಐಎಎಸ್ ಅಧಿಕಾರಿ, ಆಹಾರ ಸರಬರಾಜು ಇಲಾಖೆಯ ಆಯುಕ್ತರಾದ ಅನುರಾಗ್ ತಿವಾರಿ ಅನುಮಾನಾಸ್ಪದ ಸಾವಿನ ಬಗ್ಗೆ ತನಿಖೆ ನಡೆಸಲು ಉತ್ತರಪ್ರದೇಶ ಸರಕಾರ ವಿಶೇಷ ತನಿಖಾ ತಂಡ ರಚಿಸಿದೆ.
 
ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಅನುರಾಗ್ ತಿವಾರಿ ನಿಗೂಢ ಸಾವಿನ ಕುರಿತಂತೆ ಸತ್ಯಾಸತ್ಯತೆ ಹೊರಬರಲು ವಿಶೇಷ ಪೊಲೀಸ್ ತನಿಖಾ ತಂಡ ನೇಮಿಸಿದ್ದಾರೆ.
 
ಆದಷ್ಟು ಬೇಗ ತನಿಖೆ ನಡೆಸುವಂತೆ ವಿಶೇಷ ತನಿಖೆ ತಂಡಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಅನುರಾಗ್ ತಿವಾರಿ ನಿಗೂಢ ಸಾವಿಗೆ ಬಗ್ಗೆ ತನಿಖೆ ನಡೆಸುವಂತೆ ಬಿಜೆಪಿ ಸಂಸದ ಶೋಭಾ ಕರಂದ್ಲಾಜೆ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್‌ಗೆ ನಿನ್ನೆ ಪತ್ರ ಬರೆದು ಮನವಿ ಮಾಡಿರುವುದನ್ನು ಸ್ಮರಿಸಬಹುದು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ನನಗೆ ಯಾವುದೇ ಬಂಧನದ ಭೀತಿಯಿಲ್ಲ: ಕುಮಾರಸ್ವಾಮಿ