Daily Horoscope

ಎರಡಕ್ಕಿಂತ ಹೆಚ್ಚು ಮಕ್ಕಳಾದರೆ ಸರ್ಕಾರಿ ಸೌಲಭ್ಯ ಕಟ್: ಯೋಗಿ ಸರ್ಕಾರದ ನೀತಿ

Webdunia
ಭಾನುವಾರ, 11 ಜುಲೈ 2021 (09:30 IST)
ಲಕ್ನೋ: ಜನನಿಯಂತ್ರಣ ಮಾಡಲು ಹೊಸ ತಂತ್ರ ರೂಪಿಸಿರುವ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಎರಡಕ್ಕಿಂತ ಹೆಚ್ಚು ಮಕ್ಕಳಾದರೆ ಸರ್ಕಾರಿ ಸೌಲಭ್ಯಗಳನ್ನೇ ಕಡಿತಗೊಳಿಸುವ ಹೊಸ ನೀತಿಯೊಂದನ್ನು ಜಾರಿಗೆ ತರಲಿದೆ.


ಈ ಬಗ್ಗೆ ಕರಡು ನೀತಿ ಬಿಡುಗಡೆಯಾಗಿದ್ದು, ಜು.19 ರೊಳಗಾಗಿ ಆಕ್ಷೇಪ ಸಲ್ಲಿಸುವುದಿದ್ದರೆ ಸಲ್ಲಿಸಬಹುದಾಗಿದೆ. ಎರಡು ಮಕ್ಕಳಿಗಿಂತ ಹೆಚ್ಚಾದರೆ ಸರ್ಕಾರಿ ಸೌಲಭ್ಯಗಳು ಕಟ್ ಆಗಲಿದೆ. ಎರಡು ಅಥವಾ ಒಂದೇ ಮಗುವಿದ್ದರೆ ಸರ್ಕಾರದಿಂದ ಪ್ರೋತ್ಸಾಹಕವಾಗಿ ಸೌಲಭ್ಯಗಳು ಲಭಿಸಲಿವೆ.

ಒಂದೇ ಮಗುವಿದ್ದರೆ ದಂಪತಿಗೆ ಉಚಿತ ವೈದ್ಯಕೀಯ ವಿಮೆ, ಮಗುವಿಗೆ 20 ವರ್ಷ ತುಂಬುವವರೆಗೆ ವಿಮೆ, ಐಐಎಂ, ಏಮ್ಸ್ ಗಳಲ್ಲಿ ಆದ್ಯತೆ ಮೇರೆಗೆ ಉಚಿತ ಪ್ರವೇಶ, ಪದವಿ ಹಂತದವರೆಗೆ ಮಗುವಿಗೆ ಉಚಿತ ಶಿಕ್ಷಣ, ಸರ್ಕಾರಿ ಉದ್ಯೋಗದಲ್ಲಿ ಆದ್ಯತೆ ಸಿಗಲಿದೆ. ಅದೇ ರೀತಿ ಎರಡು ಮಕ್ಕಳಿದ್ದರೆ ಮನೆ ಕಟ್ಟುವಾಗ ಸರಳ ಸಾಲ, ನೀರು, ವಿದ್ಯುತ್ ದರ, ಮನೆ ತೆರಿಗೆ ಮನ್ನಾ, ಸರ್ಕಾರಿ ನೌಕರರಿಗೆ ಹೆಚ್ಚುವರಿ ಬಡ್ತಿ, 12 ತಿಂಗಳ ವೆತನ, ಭತ್ಯೆ ಸಹಿತ ರಜೆ, ಉಚಿತ ವೈದ್ಯಕೀಯ ಸೌಲಭ್ಯಗಳು, ಪತ್ನಿಗೆ ವಿಮೆ ಇತ್ಯಾದಿ ಸೌಲಭ್ಯಗಳನ್ನು ನೀಡಲಾಗುತ್ತದೆ. ಇದಲ್ಲದೆ ಹೆಣ್ಣು ಮಗುವಿಗೆ 1 ಲಕ್ಷ ರೂ. ಪ್ರೋತ್ಸಾಹಕ ಧನ, ಗಂಡು ಮಗುವಾದರೆ ಬಡವರಿಗೆ ಒಂದೇ ಬಾರಿಗೆ 80 ಸಾವಿರ ರೂ. ನಗದು ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments