Webdunia - Bharat's app for daily news and videos

Install App

ಕಲ್ಲಿದ್ದಲು ದಾಸ್ತಾನು ಕುಸಿತ

Webdunia
ಮಂಗಳವಾರ, 19 ಏಪ್ರಿಲ್ 2022 (13:45 IST)
ನವದೆಹಲಿ : ಕಲ್ಲಿದ್ದಲು ದಾಸ್ತಾನು ಕುಸಿತವಾಗಿದ್ದು, ಥರ್ಮಲ್ ವಿದ್ಯುತ್ ಘಟಕಗಳ ಕೆಲಸ ಕುಂಠಿತಗೊಂಡಿದೆ.
 
ಹೀಗಾಗಿ 12 ರಾಜ್ಯಗಳಲ್ಲಿ ವಿದ್ಯುತ್ ಬಿಕ್ಕಟ್ಟು ಎದುರಾಗಬಹುದು ಎಂದು ಅಖಿಲ ಭಾರತ ಎಂಜಿನಿಯರ್ಸ್ ಫೆಡರೇಷನ್ (ಎಐಪಿಇಇ) ಎಚ್ಚರಿಕೆ ನೀಡಿದೆ.

2022ರ ಏಪ್ರಿಲ್ ಮೊದಲರ್ಧ ಭಾಗದಲ್ಲಿ ದೇಶೀಯ ವಿದ್ಯುತ್ ಬೇಡಿಕೆ 38 ವರ್ಷದ ಗರಿಷ್ಠಕ್ಕೆ ಮುಟ್ಟಿದೆ. ಅಕ್ಟೋಬರ್ 2021ರಲ್ಲಿ ಕಲ್ಲಿದ್ದಲು ಕೊರತೆ ಶೇ.1.1ರಷ್ಟಿತ್ತು. ಅದು 2022ರ ಏಪ್ರಿಲ್ನಲ್ಲಿ ಶೇ.1.4ಕ್ಕೆ ಏರಿದೆ. ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್, ಪಂಜಾಬ್, ಜಾರ್ಖಂಡ್ ಹಾಗೂ ಹರಾರಯಣದಂಥ ರಾಜ್ಯಗಳಲ್ಲಿ ವಿದ್ಯುತ್ ಕಡಿತವಾಗುತ್ತಿದೆ.

ಉತ್ತರಪ್ರದೇಶದಲ್ಲಿ ಬೇಡಿಕೆ 21000 ಮೆಗಾವ್ಯಾಟ್ ತಲುಪಿದ್ದರೆ, ಪೂರೈಕೆ 19000-20000 ಮೆಗಾವ್ಯಾಟ್ನಷ್ಟಿದೆ. ಹೀಗಾಗಿ ಥರ್ಮಲ್ ಘಟಕಕ್ಕೆ ಕಲ್ಲಿದ್ದಲು ಪೂರೈಕೆ ಚುರುಕುಗೊಳಿಸಿ ಬಿಕ್ಕಟ್ಟು ಪರಿಹರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಫೆಡರೇಷನ್ ಆಗ್ರಹಿಸಿದೆ.

ಕಳೆದ ವರ್ಷ ಸುರಿದ ಭಾರೀ ಮಳೆ, ಜಾಗತಿಕ ಮಟ್ಟದಲ್ಲಿ ಬೇಡಿಕೆ ಹೆಚ್ಚಿದ ಪರಿಣಾಮ ದರ ಏರಿಕೆ ಮೊದಲಾದ ಕಾರಣಗಳಿಂದಾಗಿ ದೇಶದ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಕಲ್ಲಿದ್ದಲು ಸಂಗ್ರಹ ಕಳೆದೊಂದು ವರ್ಷದಿಂದ ಭಾರೀ ಪ್ರಮಾಣದಲ್ಲಿ ಕುಸಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಟ್ನಾ, ಏರ್‌ ಇಂಡಿಯಾ ವಿಮಾನ ಇಳಿಯುವಾಗ ಡಿಕ್ಕಿಯಾದ ಹಕ್ಕಿ

ಆಟವಾಡುತ್ತಿದ್ದ ಬಾಲಕಿ ಮೇಲೆ ಬೀದಿ ನಾಯಿ ದಾಳಿ, ಭಯಾನಕ Video

ಎಣ್ಣೆ ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿ, ಬೆಲೆ ಏರಿಕೆಯ ನಡುವೆ ತೈಲ ಸಂಗ್ರಹಿಸಲು ಮುಗಿಬಿದ್ದ ಜನತೆ, Video

ಮಂಡ್ಯದಲ್ಲಿ ಭಿಕ್ಷೆ ಬೇಡುತ್ತಿದ್ದ ಮಹಿಳೆ ನಿಧನದ ಬಳಿಕ ರೂಂ ತಲಾಷ್ ಮಾಡಿದ್ರೆ ಸಿಕ್ಕಿತು ಮೂಟೆ ಮೂಟೆ ನೋಟು: ಶಾಕಿಂಗ್ Video

ವಿದ್ಯಾರ್ಥಿನಿಯರ ಜತೆ ಆಣೆಕಟ್ಟಿನಲ್ಲಿ ಮುಖ್ಯೋಪಾಧ್ಯಯನ ನೀರಾಟ, ವಿಡಿಯೋ ವೈರಲ್ ಬೆನ್ನಲ್ಲೇ ಕಾದಿತ್ತು ಶಾಕ್, Video

ಮುಂದಿನ ಸುದ್ದಿ
Show comments