Webdunia - Bharat's app for daily news and videos

Install App

ಕಲ್ಲಿದ್ದಲು ದಾಸ್ತಾನು ಕುಸಿತ

Webdunia
ಮಂಗಳವಾರ, 19 ಏಪ್ರಿಲ್ 2022 (13:45 IST)
ನವದೆಹಲಿ : ಕಲ್ಲಿದ್ದಲು ದಾಸ್ತಾನು ಕುಸಿತವಾಗಿದ್ದು, ಥರ್ಮಲ್ ವಿದ್ಯುತ್ ಘಟಕಗಳ ಕೆಲಸ ಕುಂಠಿತಗೊಂಡಿದೆ.
 
ಹೀಗಾಗಿ 12 ರಾಜ್ಯಗಳಲ್ಲಿ ವಿದ್ಯುತ್ ಬಿಕ್ಕಟ್ಟು ಎದುರಾಗಬಹುದು ಎಂದು ಅಖಿಲ ಭಾರತ ಎಂಜಿನಿಯರ್ಸ್ ಫೆಡರೇಷನ್ (ಎಐಪಿಇಇ) ಎಚ್ಚರಿಕೆ ನೀಡಿದೆ.

2022ರ ಏಪ್ರಿಲ್ ಮೊದಲರ್ಧ ಭಾಗದಲ್ಲಿ ದೇಶೀಯ ವಿದ್ಯುತ್ ಬೇಡಿಕೆ 38 ವರ್ಷದ ಗರಿಷ್ಠಕ್ಕೆ ಮುಟ್ಟಿದೆ. ಅಕ್ಟೋಬರ್ 2021ರಲ್ಲಿ ಕಲ್ಲಿದ್ದಲು ಕೊರತೆ ಶೇ.1.1ರಷ್ಟಿತ್ತು. ಅದು 2022ರ ಏಪ್ರಿಲ್ನಲ್ಲಿ ಶೇ.1.4ಕ್ಕೆ ಏರಿದೆ. ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್, ಪಂಜಾಬ್, ಜಾರ್ಖಂಡ್ ಹಾಗೂ ಹರಾರಯಣದಂಥ ರಾಜ್ಯಗಳಲ್ಲಿ ವಿದ್ಯುತ್ ಕಡಿತವಾಗುತ್ತಿದೆ.

ಉತ್ತರಪ್ರದೇಶದಲ್ಲಿ ಬೇಡಿಕೆ 21000 ಮೆಗಾವ್ಯಾಟ್ ತಲುಪಿದ್ದರೆ, ಪೂರೈಕೆ 19000-20000 ಮೆಗಾವ್ಯಾಟ್ನಷ್ಟಿದೆ. ಹೀಗಾಗಿ ಥರ್ಮಲ್ ಘಟಕಕ್ಕೆ ಕಲ್ಲಿದ್ದಲು ಪೂರೈಕೆ ಚುರುಕುಗೊಳಿಸಿ ಬಿಕ್ಕಟ್ಟು ಪರಿಹರಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಫೆಡರೇಷನ್ ಆಗ್ರಹಿಸಿದೆ.

ಕಳೆದ ವರ್ಷ ಸುರಿದ ಭಾರೀ ಮಳೆ, ಜಾಗತಿಕ ಮಟ್ಟದಲ್ಲಿ ಬೇಡಿಕೆ ಹೆಚ್ಚಿದ ಪರಿಣಾಮ ದರ ಏರಿಕೆ ಮೊದಲಾದ ಕಾರಣಗಳಿಂದಾಗಿ ದೇಶದ ವಿದ್ಯುತ್ ಉತ್ಪಾದನಾ ಘಟಕಗಳಲ್ಲಿ ಕಲ್ಲಿದ್ದಲು ಸಂಗ್ರಹ ಕಳೆದೊಂದು ವರ್ಷದಿಂದ ಭಾರೀ ಪ್ರಮಾಣದಲ್ಲಿ ಕುಸಿದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments