Webdunia - Bharat's app for daily news and videos

Install App

ಜಿಲ್ಲಾಧಿಕಾರಿ ಕೆಲಸ ಬೊಗಳೋದು, ಎಸ್‌ಪಿ ಕೆಲಸ ಕಚ್ಚೋದು: ಶ್ರೀ ಗಂಗಾನಗರ್ ಡಿಸಿ

Webdunia
ಗುರುವಾರ, 17 ಮಾರ್ಚ್ 2016 (12:41 IST)
ಶ್ರೀಗಂಗಾನಗರ್ ಜಿಲ್ಲಾಧಿಕಾರಿ ಪಿಸಿ ಕಿಶನ್ ಅವರು ಕಾನೂನು ಮತ್ತು ಸುವ್ಯವಸ್ಥೆ ಕುರಿತಂತೆ ನೀಡಿರುವ ಹೇಳಿಕೆಯನ್ನು ವಿರೋಧಿಸಿ ಪ್ರತಿಭಟನೆಗಿಳಿದಿರುವ ರಾಜಸ್ಥಾನದ ರೈತರು, ರಾಜಕೀಯ ಪಕ್ಷಗಳು ಮತ್ತು ವ್ಯಾಪಾರಸ್ಥರು ಗುರುವಾರ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಿದ್ದಾರೆ. 

ಬುಧವಾರ ಜನರ ಕುಂದುಕೊರತೆಗಳ ಬಗ್ಗೆ ಸಾರ್ವಜನಿಕವಾಗಿ ಮಾತನಾಡುತ್ತಿದ್ದ ಕಿಶನ್ ಸಹನೆಯನ್ನು ಕಳೆದುಕೊಂಡು ಜಿಲ್ಲಾಧಿಕಾರಿ ಕೆಲಸ ಕೇವಲ ಬೊಗಳುವುದು ಮತ್ತು ಎಸ್‌ಪಿ ಕೆಲಸ ಕಚ್ಚುವುದು ಎಂದು ಹೇಳಿದ್ದರು.
 
ಈ ಹೇಳಿಕೆ ಅಲ್ಲಿ ನೆರೆದಿದ್ದ ಜನರಿಗೆ ಆಘಾತವನ್ನುಂಟು ಮಾಡಿದ್ದು ಇದು ರಾಜ್ಯವ್ಯಾಪಿ ಬಂದ್‌ಗೆ ಕಾರಣವಾಗಿದೆ. ಇದಕ್ಕೆ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಕಿಶನ್, 'ನಾನು ಒಡಿಶಾ ಮೂಲದವನಾಗಿದ್ದು ಹಿಂದಿ ಭಾಷೆ ಅಷ್ಟು ಚೆನ್ನಾಗಿ ಬರುವುದಿಲ್ಲ. ನನ್ನ ಹೇಳಿಕೆಯನ್ನು ತಿರುಚಲಾಗಿದೆ', ಎಂದು ಹೇಳಿದ್ದಾರೆ. 
 
ತಮ್ಮ ಉದ್ದೇಶ ಯಾರಿಗೂ ನೋವುಂಟು ಮಾಡುವುದಾಗಿರಲಿಲ್ಲ ಎಂದು ಹೇಳಿರುವ ಅವರು ಕ್ಷಮೆಯಾಚಿಸಿದ್ದಾರೆ ಮತ್ತು ಜಿಲ್ಲಾಧಿಕಾರಿ ಕೆಲಸ ಆಡಳಿತವನ್ನು ನೋಡಿಕೊಳ್ಳುವುದು ಮತ್ತು ಪೊಲೀಸ್ ಅಧಿಕಾರಿಗಳ ಕೆಲಸ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದು ಎಂದು ಮರು ಹೇಳಿಕೆ ನೀಡುವುದರ ಮೂಲಕ ವಿವಾದವನ್ನು ತಿಳಿಗೊಳಿಸಲು ಪ್ರಯತ್ನಿಸಿದ್ದಾರೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

Show comments