Webdunia - Bharat's app for daily news and videos

Install App

ಕುಮಾರಸ್ವಾಮಿ ಆರ್‌ಎಸ್‌ಎಸ್‌ ಸಂಘದ ಶಾಖೆಗೆ ಬಂದು ಶಿಕ್ಷಣ ಪಡೆಯಲಿ : ಕಟೀಲ್

Webdunia
ಬುಧವಾರ, 6 ಅಕ್ಟೋಬರ್ 2021 (12:33 IST)
ಶಿವಮೊಗ್ಗ,ಅ.6 : ಆರ್ಎಸ್ಎಸ್ ಕುರಿತು ಲಘುವಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಂಘದ ಶಾಖೆಗೆ ಬಂದು ಶಿಕ್ಷಣ ಪಡೆಯಲಿ. ಇದರಿಂದ ಅವರಿಗೂ ಒಳಿತಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ನಳೀನ್‍ಕುಮಾರ್ ಕಟೀಲ್ ವ್ಯಂಗ್ಯಭರಿತ ಸಲಹೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಘದ ಬಗ್ಗೆ ಸ್ಪಷ್ಟ ಜ್ಞಾನ ಇಲ್ಲದವರು ಬೇಕಾಬಿಟ್ಟಿ ಹೇಳಿಕೆ ನೀಡುತ್ತಾರೆ. ಕುಮಾರಸ್ವಾಮಿಗೆ ಆರ್ಎಸ್ಎಸ್ ಬಗ್ಗೆ ಗೊತ್ತಾಗಬೇಕಾದರೆ ಮೊದಲು ಸಂಘದ ಶಾಖೆಗೆ ಬರಲಿ ಎಂದು ಸಲಹೆ ಮಾಡಿದರು.
ಅವರು ಅಧಿಕಾರದಲ್ಲಿ ಇದ್ದಾಗ ಜಾತಿವಾದದಲ್ಲಿ ಎಲ್ಲರನ್ನು ತೆಗೆದುಕೊಳ್ಳುತ್ತಿದ್ದರು. ಕುಟುಂಬ ರಾಜಕಾರಣ ಮಾಡಿದರು. ಕುಟುಂಬದವರಿಗೆ ಎಲ್ಲ ಅಧಿಕಾರ ಕೊಟ್ಟವರು. ಇಂತಹವರಿಂದ ಬೇರೆ ನಿರೀಕ್ಷೆ ಮಾಡಲು ಸಾಧ್ಯವೇ? ಸಂಘದ ಶಿಕ್ಷಣ ಪಡೆದವರು ಐಎಎಸ್, ಐಪಿಎಸ್ ಅಧಿಕಾರಿಯಾಗದರೆ ನಾವು ಸಂತೋಷ ಪಡುತ್ತೇವೆ. ಅವರಿಂದಾಗಿ ದೇಶಕ್ಕೆ ಇನ್ನಷ್ಟು ಒಳ್ಳೆಯದು ಆಗುತ್ತದೆ ಎಂದರು.
ಇದೇ ವೇಳೆ ಉಪಚುನಾವಣೆ ಕುರಿತು ಮಾತನಾಡಿದ ಕಟೀಲ್, ಸಿಂಧಗಿ ಹಾಗೂ ಹಾನಗಲ್ ಕ್ಷೇತ್ರದಲ್ಲಿ ಉಪ ಚುನಾವಣೆ ಘೋಷಣೆ ಆಗಿದೆ. ಬಿಜೆಪಿ ಈಗಾಗಲೇ ಮತಗಟ್ಟೆ ಕಾರ್ಯಕ್ರಮ ಮುಗಿಸಿದೆ. ಎಲ್ಲ ಕಾರ್ಯಕರ್ತರು ಮನೆ ಮನೆ ಸಂಪರ್ಕ ಕಾರ್ಯಕ್ರಮ ಆರಂಭಿಸಿದ್ದಾರೆ ಎಂದು ತಿಳಿಸಿದರು.
ಎರಡು ಕಡೆಯಲ್ಲಿ ಬಿಜೆಪಿ ಪರವಾದ ಅಲೆ ಇದೆ
ಎರಡೂ ಕ್ಷೇತ್ರಗಳಲ್ಲಿಯೂ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸುತ್ತದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳು, ಯೋಜನೆಗಳು ಹಾಗೂ ಸರ್ಕಾರದ ಸಾಧನೆ ಮುಂದಿಟ್ಟುಕೊಂಡು ಜನರ ಬಳಿ ಮತಯಾಚನೆ ಮಾಡುತ್ತೇವೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments