Webdunia - Bharat's app for daily news and videos

Install App

ಹರಿಯಾಣದಲ್ಲಿ ಕೋಮು ಸಂಘರ್ಷ: ಸಾವಿನ ಸಂಖ್ಯೆ 5ಕ್ಕೆ ಏರಿಕೆ !

Webdunia
ಬುಧವಾರ, 2 ಆಗಸ್ಟ್ 2023 (11:31 IST)
ಚಂಡೀಗಢ : ಕೋಮು ಸಂಘರ್ಷಕ್ಕೆ ಹರಿಯಾಣ ತತ್ತರಿಸಿದೆ. ನಿನ್ನೆಯಿಂದ ನೂಹ್ ಮತ್ತು ಗುರುಗ್ರಾಮ್ ಜಿಲ್ಲೆಗಳು ಹೊತ್ತಿ ಉರಿಯುತ್ತಿವೆ. ಕರ್ಫ್ಯೂ ಲೆಕ್ಕಿಸದೇ ಜನ ಬೀದಿಗಿಳಿದು ಹಿಂಸಾಚಾರದಲ್ಲಿ ತೊಡಗಿದ್ದಾರೆ. ಆಸ್ತಿ-ಪಾಸ್ತಿಗಳಿಗೆ ಹಾನಿ ಮಾಡ್ತಿದ್ದಾರೆ.
 
ಮಂಗಳವಾರ 200 ಮಂದಿಯನ್ನೊಳಗೊಂಡ ಶಸ್ತ್ರಸಜ್ಜಿತ ಗುಂಪೊಂದು ಏಕಾಏಕಿ ದಾಳಿ ನಡೆಸಿದ್ದು, ಬಹಳಷ್ಟು ಹಾನಿಯುಂಟು ಮಾಡಿದೆ.

ಗುರುಗ್ರಾಮದಲ್ಲಿ ಮಂಗಳವಾರವೂ ಆಕ್ಷೇಪಾರ್ಹ ಘೋಷಣೆಗಳನ್ನ ಕೂಗುತ್ತಾ ರೆಸ್ಟೋರೆಂಟ್, ಅಂಗಡಿಗಳಿಗೆ ಬೆಂಕಿ ಹಚ್ಚಿದ್ದಾರೆ. ನಿನ್ನೆ ರಾತ್ರಿಯಿಂದಲೂ ನಡೆಯುತ್ತಿರುವ ಘರ್ಷಣೆಯಲ್ಲಿ ಈವರೆಗೆ ಐವರು ಬಲಿಯಾಗಿದ್ದಾರೆ. 

ಸೋಮವಾರ ಸಂಜೆ ಮೆವಾತ್ನಲ್ಲಿ ವಿಹೆಚ್ಪಿ- ಬಜರಂಗದಳದ ಶೋಭಾಯಾತ್ರೆ ಮೇಲೆ ಕಲ್ಲು ತೂರಾಟದಿಂದಾಗಿ ನಡೆದ ಘರ್ಷಣೆಯಲ್ಲಿ ಇಬ್ಬರು ಹೋಂಗಾರ್ಡ್ಗಳು ಸಾವನ್ನಪ್ಪಿದ್ರು. ರಾತ್ರಿ ಮತ್ತೆ ನಡೆದ ಘರ್ಷಣೆಯಲ್ಲಿ ಇನ್ನಿಬ್ಬರು ಬಲಿಯಾಗಿದ್ದಾರೆ. 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ, ಅಶ್ರುವಾಯು ಸಿಡಿಸಿ ಪರಿಸ್ಥಿತಿ ಹತೋಟಿಗೆ ತರಲು ಪ್ರಯತ್ನಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments