Webdunia - Bharat's app for daily news and videos

Install App

ಹೀರಾಬೆನ್ ಅಗಲಿಕೆಗೆ ಗಣ್ಯರ ಸಂತಾಪ

Webdunia
ಶುಕ್ರವಾರ, 30 ಡಿಸೆಂಬರ್ 2022 (10:21 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರು ಶುಕ್ರವಾರ ಬೆಳಗ್ಗೆ ತಮ್ಮ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಬೆಳಗ್ಗಿನ ಜಾವ 3.39ರ ಸುಮಾರಿಗೆ ಅವರು ಕೊನೆಯುಸಿರೆಳೆದಿದ್ದಾಳೆ.

ಆರೋಗ್ಯ ಸಮಸ್ಯೆಗಳಿಂದಾಗಿ ಅವರನ್ನು 2 ದಿನಗಳ ಹಿಂದೆ ಅಹಮದಾಬಾದ್ನ ಯುಎನ್ ಮೆಹ್ತಾ ಕಾರ್ಡಿಯಾಲಜಿ ಮತ್ತು ಸಂಶೋಧನಾ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಅವರ ನಿಧನದ ಸುದ್ದಿ ಹೊರಹೊಮ್ಮುತ್ತಿದ್ದಂತೆಯೇ, ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಪ್ರಧಾನಿ ಮೋದಿ ಅವರ ತಾಯಿಯ ನಿಧನಕ್ಕೆ ದುಃಖ ವ್ಯಕ್ತಪಡಿಸಿದ್ದಾರೆ. ಹೀರಾಬೆನ್ ಅವರು ಎಲ್ಲರಿಗೂ ಮಾದರಿ ಎಂದು ಶಾ ಟ್ವೀಟ್ನಲ್ಲಿ ತಿಳಿಸಿದ್ದಾರೆ. ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ನಿಧನದ ಬಗ್ಗೆ ತಿಳಿದು ತುಂಬಾ ದುಃಖವಾಗಿದೆ.

ಹೀರಾಬೆನ್ ನಿಧನಕ್ಕೆ ಸಂತಾಪ ಸೂಚಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ದೇಶಕ್ಕೆ ಜನನಾಯಕ ಪ್ರಧಾನಿ ನರೇಂದ್ರ ಮೋದಿಯವರಂತಹ ಮಗನನ್ನು ನೀಡಿ, ಶತಾಯುಷಿಯಾಗಿ ಬದುಕಿ ಬಾಳಿ ದೇವರ ಚರಣ ಸೇರಿದ ಹೀರಾಬೆನ್ ಅವರಿಗೆ ಗೌರವಪೂರ್ವಕ ವಿದಾಯಗಳು. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ ಹಾಗೂ ಪ್ರಧಾನಿಯವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ನಲ್ಲಿ ಬರೆದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಗೃಹಸಚಿವ ಅರಗ ಜ್ಞಾನೇಂದ್ರ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್ ಮೋದಿ ಅವರು ದೈವಾಧೀನರಾದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ವಿಶ್ವದ ಅತ್ಯಂತ ಬಲಿಷ್ಠ ನಾಯಕನಿಗೆ ಜನ್ಮ ನೀಡಿದ ಆ ದಿವ್ಯ ಚೇತನಕ್ಕೆ ದೇವರು ಚಿರ ಶಾಂತಿ ಕರುಣಿಸಲಿ, ಅವರ ಕುಟುಂಬದ ದುಃಖದಲ್ಲಿ ನಾನು ಸಹ ಭಾಗಿಯಾಗಿದ್ದೇನೆ ಎಂದಿದ್ದಾರೆ.

ಸಂತಾಪ ಸೂಚಿಸಿರುವ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ, ಹೀರಾಬೆನ್ ಅವರು ಶತಾಯುಷಿಯಾಗಿ ಅವರು ತಮ್ಮ ಪೂರ್ಣ ಜೀವನವನ್ನು ನಡೆಸಿದ್ದಾರೆ. ಆದರೆ ಒಬ್ಬ ತಾಯಿಯಾಗಿ ತನ್ನ ಸುತ್ತಲೂ ಶಾಶ್ವತವಾಗಿ ಶಕ್ತಿ ತುಂಬಲು ಬಯಸುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೇವರು ತಮಗಾದ ನಷ್ಟವನ್ನು ಭರಿಸುವ ಶಕ್ತಿ ಕೊಡಲಿ ಎಂದಿದ್ದಾರೆ. 

ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಮೋದಿ ತಾಯಿ ನಿಧನಕ್ಕೆ ಸಂತಾಪ ಸೂಚಿಸಿ, ಮಗನಿಗೆ ತಾಯಿಯೇ ಇಡೀ ಜಗತ್ತು. ಅವರ ಸಾವು ತುಂಬಲಾಗದ ನಷ್ಟ ಎಂದಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರ ನಿಧನದಿಂದ ನನಗೆ ತುಂಬಾ ನೋವಾಗಿದೆ. ತಾಯಿಯ ಸಾವು ಒಬ್ಬರ ಜೀವನದಲ್ಲಿ ತುಂಬಲು ಅಸಾಧ್ಯವಾದ ಶೂನ್ಯವನ್ನು ಉಂಟುಮಾಡುತ್ತದೆ. ಈ ದುಃಖದ ಸಮಯದಲ್ಲಿ ಪ್ರಧಾನಮಂತ್ರಿ ಮತ್ತು ಅವರ ಇಡೀ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ.

ಪಂಜಾಬ್ ಸಿಎಂ ಭಗವಂತ್ ಮಾನ್ ಈ ಬಗ್ಗೆ ಟ್ವೀಟ್ ಮಾಡಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ತಾಯಿಯ ನಿಧನದ ದುಃಖದ ಸುದ್ದಿಯನ್ನು ಸ್ವೀಕರಿಸಿದೆ. ತಾಯಿಯ ಮರಣವು ಜೀವನದ ಅತಿದೊಡ್ಡ ಪೂರೈಸಲಾಗದ ಕೊರತೆಯಾಗಿದೆ. ಈ ದುಃಖದ ಸಮಯದಲ್ಲಿ ನಾನು ಪ್ರಧಾನಮಂತ್ರಿ ಮತ್ತು ಅವರ ಇಡೀ ಕುಟುಂಬಕ್ಕೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments