Publish Date: Tue, 26 Apr 2016 (15:50 IST)
Updated Date: Tue, 26 Apr 2016 (16:19 IST)
ಉತ್ತರಾಖಂಡ್ನ ರಾಜಕೀಯ ಬಿಕ್ಕಟ್ಟಿನ ಮೇಲೆ ಚರ್ಚೆಗೆ ಒತ್ತಾಯಿಸಿ ಕಾಂಗ್ರೆಸ್ ಸದಸ್ಯರು ಘೋಷಣೆಗಳನ್ನು ಕೂಗಿದ್ದರಿಂದ ರಾಜ್ಯಸಭೆಯನ್ನು ಮಧ್ಯಾಹ್ನದವರೆಗೆ ಮುಂದೂಡಲಾಯಿತು.
ಉತ್ತರಾಖಂಡ್ನಲ್ಲಿ ಹೇರಲಾಗಿರುವ ರಾಷ್ಟ್ರಪತಿ ಆಳ್ವಿಕೆ ಬಗ್ಗೆ ಚರ್ಚೆ ಇಲ್ಲ ಎಂದು ರಾಜ್ಯ ಸಭಾ ನಾಯಕರಾದ ಅರುಣ್ ಜೇಟ್ಲಿ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತು ವಿತ್ತ ಸಚಿವ ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತ ಕಾಂಗ್ರೆಸ್ ಸದಸ್ಯರು ಸದನದ ಬಾವಿಯೊಳಗೆ ಇಳಿದು ಪ್ರತಿಭಟನೆ ನಡೆಸಿದರು.
ಉತ್ತರಾಖಂಡ್ನಲ್ಲಿ ರಾಷ್ರಪತಿ ಆಳ್ವಿಕೆ ಹೇರಿರುವದನ್ನು ಸಮರ್ಥಿಸಿಕೊಂಡ ಜೇಟ್ಲಿ, ರಾಜ್ಯದಲ್ಲಿ ಸಾಂವಿಧಾನಿಕ ಯಂತ್ರ ಮುರಿದು ಬಿದ್ದಿದೆ ಎಂದು ಜೇಟ್ಲಿ ಹೇಳಿದ್ದಾರೆ.
ತಿಂಗಳ ವಿರಾಮದ ಬಳಿಕ ಆರಂಭವಾದ ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ದಿನದ ಕಲಾಪ ಸಹ ಕಾಂಗ್ರೆಸ್ ಸದಸ್ಯರ ಗದ್ದಲಕ್ಕೆ ಬಲಿಯಾಗಿತ್ತು.
ತಾಜಾ ಸುದ್ದಿಗಳನ್ನು ಓದಲು
ಮೊಬೈಲ್ ಆಪ್ ಡೌನ್ಲೋಡ್ ಮಾಡಿಕೊಳ್ಳಿ .