ಪ್ರಧಾನಿ ಮೋದಿ ಭ್ರಷ್ಟಾಚಾರ, ನೋಟು ನಿಷೇಧ ವಿರೋಧಿಸಿ ಜ.6 ರಿಂದ ಕಾಂಗ್ರೆಸ್ ಪ್ರತಿಭಟನೆ

Webdunia
ಗುರುವಾರ, 29 ಡಿಸೆಂಬರ್ 2016 (16:52 IST)
ಪ್ರಧಾನಮಂತ್ರಿ ನರೇಂದ್ರ ಮೋದಿಯ ಭ್ರಷ್ಟಾಚಾರ ಮತ್ತು ನೋಟು ನಿಷೇಧ ಕುರಿತಂತೆ ಕಾಂಗ್ರೆಸ್ ಪಕ್ಷ ಜನೆವರಿ 6 ರಿಂದ ದೇಶಾದ್ಯಂತ ಪ್ರತಿಭಟನೆ ಆರಂಭಿಸುವುದಾಗಿ ಘೋಷಿಸಿದೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿಯ ಭ್ರಷ್ಟಾಚಾರ ಮತ್ತು ನೋಟು ನಿಷೇಧ ಕುರಿತಂತೆ ಕಾಂಗ್ರೆಸ್ ಪಕ್ಷ ಮೂರು ಹಂತಗಳಲ್ಲಿ ಪ್ರತಿಭಟನೆ ನಡೆಸಲಿದ್ದು, ಅದರಂತೆ ಜನೆವರಿ 6 ರಂದು ಮೊದಲ ಹಂತದ ಪ್ರತಿಭಟನೆ ಆರಂಭಿಸಲಾಗುತ್ತಿದೆ ಎಂದು ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಕಾರ್ಪೋರೇಟ್ ಕಂಪೆನಿಗಳಿಂದ 65 ಕೋಟಿ ರೂಪಾಯಿ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
 
ನಾವು ಪ್ರಧಾನಿ ಮೋದಿಯವರಿಗೆ ನೀವು ಹಣ ಪಡೆದಿದ್ದೀರಾ ಅಥವಾ ಇಲ್ಲ ಎನ್ನುವ ಸರಳವಾದ ಪ್ರಶ್ನೆಯನ್ನು ಕೇಳುತ್ತಿದ್ದೇವೆ. ಒಂದು ವೇಳೆ ನೀವು ತೆಗೆದುಕೊಂಡಿಲ್ಲ ಎಂದಾದಲ್ಲಿ ಸ್ವತಂತ್ರ ತನಿಖೆಗೆ ಯಾಕೆ ಆದೇಶ ನೀಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
 
ಗುಜರಾತ್ ಮಾಜಿ ಮುಖ್ಯಮಂತ್ರಿ ಸುರೇಶ್ ಮೆಹತಾ, ಕಪ್ಪು ಹಣದ ಆರೋಪಿ ಮಹೇಶ್ ಶಾಹ್, ಅಂದು ಗುಜರಾತ್ ಮುಖ್ಯಮಂತ್ರಿಯಾಗಿದ್ದ ಮೋದಿಯನ್ನು ಯಾವುದೇ ನಿರ್ಭಂಧವಿಲ್ಲದೇ ಭೇಟಿ ಮಾಡುತ್ತಿದ್ದರು ಎಂದು ಹೇಳಿಕೆ ನೀಡಿರುವುದಾಗಿ ಕಾಂಗ್ರೆಸ್ ಪಕ್ಷದ ವಕ್ತಾರ ರಣದೀಪ್ ಸುರ್ಜೇವಾಲಾ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಸಿಡ್ನಿ: ಗುಂಡಿನ ದಾಳಿಯಲ್ಲಿ ಹಲವಾರು ಮಂದಿ ಸಾವು

ಆವರಿಸಿದ ದಟ್ಟ ಮಂಜು, ಕಾಲುವೆಗೆ ಉರುಳಿದ ಕಾರು, ದಂಪತಿ ದುರಂತ ಅಂತ್ಯ

ಮುಂದಿನ ಸುದ್ದಿ
Show comments