Webdunia - Bharat's app for daily news and videos

Install App

27 ಸಾಲ್ ಯುಪಿ ಬೇಹಾಲ್: ಕಾಂಗ್ರೆಸ್‌ನಿಂದ ಮೂರು ದಿನಗಳ ಬಸ್ ಯಾತ್ರೆ

Webdunia
ಶುಕ್ರವಾರ, 22 ಜುಲೈ 2016 (16:31 IST)
ಮುಂದಿನ ವರ್ಷದ ಆರಂಭದಲ್ಲಿ ಉತ್ತರಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾರರನ್ನು ಓಲೈಸಲು ಕಾಂಗ್ರೆಸ್ ಪಕ್ಷ ಜುಲೈ 23 ರಂದು ದೆಹಲಿಯಿಂದ ಕಾನ್ಪುರ್‌ವರೆಗೆ ಬಸ್ ಯಾತ್ರೆ ಹಮ್ಮಿಕೊಂಡಿದೆ.
 
ದೆಹಲಿಯಿಂದ ಸುಮಾರು 600 ಕಿ.ಮೀ ದೂರದಲ್ಲಿರುವ ಕಾನ್ಪುರ್‌ವರೆಗೆ ಬಸ್ ಯಾತ್ರೆ ಹಮ್ಮಿಕೊಳ್ಳಲಾಗಿದ್ದು 27 ಸಾಲ್ ಯುಪಿ ಬೇಹಾಲ್ ಎನ್ನುವ ಶೀರ್ಷಿಕೆಯನ್ನು ಹೊಂದಿದೆ. ಬಸ್ ಯಾತ್ರೆಗೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಚಾಲನೆ ನೀಡಲಿದ್ದಾರೆ. ರಾಹುಲ್ ಕೂಡಾ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಲಕ್ನೋದಲ್ಲಿ ಜುಲೈ 29 ರಂದು ಕಾಂಗ್ರೆಸ್ ಪಕ್ಷದ ರಾಜ್ಯ ಘಟಕದ ಸಭೆ ನಡೆಯಲಿದ್ದು ರಾಹುಲ್ ಗಾಂಧಿ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಘಟಕದ ಅಧ್ಯಕ್ಷ ಸಂಜಯ್ ಸಿಂಗ್ ತಿಳಿಸಿದ್ದಾರೆ. 
 
ಕಳೆದ 27 ವರ್ಷಗಳ ಅವಧಿಯಲ್ಲಿ ಸಮಾಜವಾದಿ ಪಕ್ಷ, ಬಹುಜನ ಸಮಾಜ ಪಕ್ಷ ಮತ್ತು ಬಿಜೆಪಿ ಪಕ್ಷಗಳು ರಾಜ್ಯದಲ್ಲಿ ದುರಾಡಳಿತ ನಡೆಸಿ ರಾಜ್ಯವನ್ನು ಸಂಪೂರ್ಣವಾಗಿ ಅಭಿವೃದ್ಧಿಹೀನವಾಗಿಸಿವೆ. ಪ್ರತಿಯೊಬ್ಬ ಮತದಾರನ್ನು ಎರಡರಿಂದ ಮೂರು ಬಾರಿ ಭೇಟಿಯಾಗುವಂತಹ ಪ್ರಚಾರ ಕಾರ್ಯ ಹಮ್ಮಿಕೊಳ್ಳಲಿದ್ದೇವೆ ಎಂದರು. 
 
ಮೂರು ದಿನಗಳ ಬಸ್ ಯಾತ್ರೆಯಲ್ಲಿ ಗುಲಾಮ್ ನಬಿ ಆಜಾದ್, ರಾಜ್ ಬಬ್ಬರ್ ಮತ್ತು ಮುಖ್ಯಮಂತ್ರಿ ಅಭ್ಯರ್ಥಿ ಶೀಲಾ ದೀಕ್ಷಿತ್ ಸೇರಿದಂತೆ ಹಿರಿಯ ನಾಯಕರು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರರು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments