Webdunia - Bharat's app for daily news and videos

Install App

ಅವ್ಯವಹಾರ ಪ್ರಕರಣ: ಮಹಾರಾಷ್ಟ್ರ ಸಚಿವ ಕೇದಾರ್ ವಜಾಕ್ಕೆ ಕಾಂಗ್ರೆಸ್ ಆಗ್ರಹ

Webdunia
ಸೋಮವಾರ, 23 ಆಗಸ್ಟ್ 2021 (14:07 IST)
ನಾಗಪುರ: ನಾಗಪುರ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ನಲ್ಲಿ 2002ರಲ್ಲಿ ನಡೆದ ₹ 150 ಕೋಟಿ ಅವ್ಯವಹಾರ ಪ್ರಕರಣದ ಆರೋಪಿಯಾಗಿರುವ ಮಹಾರಾಷ್ಟ್ರದ ಸಚಿವ ಸುನಿಲ್ ಕೇದಾರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕ ಆಶಿಶ್ ದೇಶಮುಖ್ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದಾರೆ.

ಸುನಿಲ್ ಅವರು ಸಹ ಕಾಂಗ್ರೆಸ್ ಪಕ್ಷದವರೇ ಆಗಿದ್ದು, ಶಿವಸೇನಾ ಮತ್ತು ಎನ್ಸಿಪಿ ಜತೆಗೆ ಅಧಿಕಾರ ಹಂಚಿಕೊಂಡಿರುವ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಈ ಪ್ರಕರಣದಲ್ಲಿ ತಮಗೆ ಆಪ್ತರಾಗಿರುವ ವಕೀಲರೊಬ್ಬರನ್ನು ಸುನಿಲ್ ಕೇದಾರ್ ಅವರು ಸರ್ಕಾರಿ ವಕೀಲರನ್ನಾಗಿ ನೇಮಿಸಿರುವುದೇ ಆಶಿಶ್ ದೇಶಮುಖ್ ಅವರ ಆಕ್ಷೇಪಕ್ಕೆ ಪ್ರಮುಖ ಕಾರಣವಾಗಿದೆ.
'ಕೇದಾರ್ ಅವರು 19 ವರ್ಷಗಳಿಂದ ಪ್ರಕರಣವನ್ನು ಒಂದಿಲ್ಲೊಂದು ರೀತಿಯಲ್ಲಿ ವಿಳಂಬಗೊಳಿಸುತ್ತಲೇ ಇದ್ದಾರೆ. ಪ್ರಕರಣ ಇದೀಗ ಕೊನೆಯ ಹಂತಕ್ಕೆ ಬಂದಿದೆ. ತಮ್ಮ ವಿರುದ್ಧ ಪ್ರಬಲವಾಗಿ ವಾದ ಮಂಡಿಸದೆ ಪ್ರಕರಣದಿಂದ ತಮ್ಮನ್ನು ಖುಲಾಸೆಗೊಳಿಸುವಂತೆ ಮಾಡುವ ಸಲುವಾಗಿಯೇ ಸರ್ಕಾರಿ ವಕೀಲರ ನೇಮಕಾತಿ ನಡೆದಿದೆ. ಹೀಗಾಗಿ ಈ ನೇಮಕಾತಿ ರದ್ದುಪಡಿಸುವುದರ ಜತೆಗೆ ಕೇದಾರ್ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು' ಎಂದು ದೇಶಮುಖ್ ತಮ್ಮ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತ, ಪಾಕಿಸ್ತಾನ ಕದನದಲ್ಲಿ 5 ಜೆಟ್ ಹೊಡೆದುರುಳಿಸಲಾಗಿತ್ತು: ಟ್ರಂಪ್ ಮತ್ತೆ ಕಿರಿಕ್

ವಿಪಕ್ಷದವರಿಗೂ ದುಡ್ಡು ಸಿಗುತ್ತೆ, ಕಾಯ್ಬೇಕು ಅಂದ್ರೆ ಏನು ಸ್ವಾಮಿ ಅರ್ಥ: ಆರ್ ಅಶೋಕ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ವಾರಂತ್ಯಕ್ಕೆ ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ

ಪ್ರಜ್ವಲ್ ರೇವಣ್ಣಗೆ ಜುಲೈ 30 ಮಹತ್ವದ ದಿನ: ಮಗನಿಗಾಗಿ ರೇವಣ್ಣ ಭೀಷ್ಮ ಪ್ರತಿಜ್ಞೆ

ಮುಂದಿನ ಸುದ್ದಿ
Show comments