Webdunia - Bharat's app for daily news and videos

Install App

19 ತಿಂಗಳು ಕಾಂಗ್ರೆಸ್ ದೇಶವನ್ನು ಜೈಲಾಗಿಸಿತ್ತು: ಮೋದಿ

Webdunia
ಮಂಗಳವಾರ, 15 ನವೆಂಬರ್ 2016 (14:57 IST)
ನೋಟು ನಿಷೇಧದ ನಿರ್ಧಾರಕ್ಕೆ ಟೀಕೆಗಿಳಿದಿರುವ ಕಾಂಗ್ರೆಸ್‌ ಮೇಲಿ ಹರಿಹಾಯ್ದಿರುವ ನರೇಂದ್ರ ಮೋದಿ, ಇಂದಿರಾ ಗಾಂಧಿ ಗಾದಿ ಉಳಿಸಿಕೊಳ್ಳಲು ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿದ್ದ ಕಾಂಗ್ರೆಸ್ 19 ತಿಂಗಳು ಸಂಪೂರ್ಣ ದೇಶವನ್ನು  ಜೈಲಾಗಿ ಪರಿವರ್ತಿಸಿತ್ತು ಯಾರೊಬ್ಬರಲ್ಲಿಯೂ ಅಭಿಪ್ರಾಯ ಕೇಳದೆ ಕಾಂಗ್ರೆಸ್ 25 ಪೈಸೆಯನ್ನು ರದ್ದು ಮಾಡಿತು. ಅವರ ಘನತೆಗೆ ತಕ್ಕಂತೆ ಅವರು ಮಾಡಿದ್ದರು ಎಂದು ಪ್ರಧಾನಿ ವ್ಯಂಗ್ಯವಾಡಿದ್ದಾರೆ.
 
ಪ್ರಾಮಾಣಿಕತೆ ಹೆಸರಲ್ಲಿ ದೇಶವನ್ನು ತಪ್ಪು ದಾರಿಗೆ ಎಳೆಯುತ್ತಿರುವ ನಾಯಕರಲ್ಲಿ ಭ್ರಷ್ಟಾಚಾರ ಮತ್ತು ಅಪ್ರಾಮಾಣಿಕತೆ ಮುಂದುವರೆಯಬೇಕು ಎಂದು ಹೇಳುವ ಧೈರ್ಯ ನಿಮಗಿದೆಯೇ ಎಂದು ನಾನು ಕೇಳ ಬಯಸುತ್ತೇನೆ. ವಿಶೇಷವಾಗಿ, ನೋಟು ರದ್ದುಗೊಳಿಸಿರುವುದಕ್ಕೆ ಎದುರಾಗಿರುವ ಸಮಸ್ಯೆಗಳಿಗಾಗಿ ನನ್ನ ವಿರುದ್ಧ ಆರೋಪ, ಟೀಕೆಗಳಿಗಿಳಿದಿರುವ ಕಾಂಗ್ರೆಸ್ ನಾಯಕರು ಕೇವಲ ಹೇಳಿಕೆಗಳನ್ನು ನೀಡುತ್ತಾರೆ. ಆದರೆ ನಾನು ಜನರ ಸಮಸ್ಯೆಗಳನ್ನು ತಾದಾತ್ಮ್ಯತೆಯಿಂದ ನೋಡುತ್ತಿದ್ದೇನೆ ಎಂದಿದ್ದಾರೆ ಮೋದಿ .
 
ಉತ್ತರ ಪ್ರದೇಶದ ಘಾಜಿಪುರದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ ಎನ್ನುವುದು ಎಲ್ಲರಿಗೂ ತಿಳಿದಿರುವ ವಿಷಯವಾಗಿತ್ತು. ಆದರೆ ಅದನ್ನು ಹೇಗೆ ಕಿತ್ತೊಗೆಯಬೇಕು ಎಂದು ಈವರೆಗೆ ಆಡಳಿತ ನಡೆಸಿದ್ದ ಕೇಂದ್ರ ಸರಕಾರಕ್ಕೆ ತಿಳಿದಿರಲಿಲ್ಲ. ಆದರೆ ಈಗಿನ ಕೇಂದ್ರ ಸರಕಾರ ಸಾಕಷ್ಟು ಸಮಸ್ಯೆಯನ್ನು ಮೈಮೇಲೆ ಹೊತ್ತುಕೊಂಡು ಅದನ್ನು ಕಿತ್ತೊಗೆಯಲು ಪ್ರಯತ್ನಿಸುತ್ತಿದೆ ಎಂದರು.
 
ಇಂದು ಮಾಜಿ ಪ್ರಧಾನಿ ನೆಹರು ಅವರ ಜನ್ಮದಿನ. ಪ್ರಧಾನಿ ಕುಟುಂಬದವರು ಈವರೆಗೆ ಮಾಡದ ಕಾರ್ಯವನ್ನು ನಾನು ಮಾಡುತ್ತಿದ್ದೇನೆ. ಆ ಮೂಲಕ ಅವರ ಆತ್ಮಕ್ಕೆ ಗೌರವ ಸಲ್ಲಿಸಲು ಬಯಸುತ್ತೇನೆ ಎಂದ ಮೋದಿ, ನೋಟು ಬದಲಾವಣೆ ಮಾಡಿದ ಕಾರಣ ಕೆಲವು ಪಕ್ಷಗಳು ಚಿಂತಾಕ್ರಾಂತವಾಗಿವೆ. ಮುಂದೇನು ಮಾಡುವುದು ಎಂಬ ಚಿಂತೆ ಅವರನ್ನು ಕಾಡುತ್ತಿದೆ. ಈ ನಡುವೆ ಸಾಮಾನ್ಯ ಜನರು ಎದುರಿಸುತ್ತಿರುವ ಅನಾನುಕೂಲತೆಗಳಿಗಾಗಿ ವಿಷಾದಿಸುತ್ತೇನೆ ಎಂದು ಪ್ರಧಾನಿ ಹೇಳಿದ್ದಾರೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಕೇಸ್ ಬಗ್ಗೆ ಇಂದು ಸಚಿವ ಪರಮೇಶ್ವರ್ ಏನು ಹೇಳ್ತಾರೆ ಎಂಬುದೇ ಎಲ್ಲರ ಕುತೂಹಲ

ಮುಂದಿನ ಸುದ್ದಿ
Show comments