Publish Date: Mon, 28 Nov 2022 (06:32 IST)
Updated Date: Mon, 28 Nov 2022 (08:33 IST)
ಗಾಂಧೀನಗರ : ಕಾಂಗ್ರೆಸ್ ಆಡಳಿತದ ಸಂದರ್ಭದಲ್ಲಿ ಭಯೋತ್ಪಾದನೆ ಉತ್ತುಂಗದಲ್ಲಿತ್ತು. ಭಯೋತ್ಪಾದನೆಯನ್ನು ಟಾರ್ಗೆಟ್ ಮಾಡಿ ಎಂದರೆ, ಆಗಿನ ಕಾಂಗ್ರೆಸ್ ಸರ್ಕಾರ ನನ್ನನ್ನ ಟಾರ್ಗೆಟ್ ಮಾಡಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಟೀಕಾಪ್ರಹಾರ ನಡೆಸಿದ್ದಾರೆ.
ಗುಜರಾತ್ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ ಅವರು, ವೋಟ್ ಬ್ಯಾಂಕ್ ರಾಜಕೀಯದ ಕಾರಣ ಕಾಂಗ್ರೆಸ್ ಭಯೋತ್ಪಾದಕರ ಬದಲಿಗೆ ತನ್ನನ್ನು ಗುರಿಯಾಗಿಸಿತ್ತು ಎಂದು ವಾಗ್ದಾಳಿ ನಡೆಸಿದ್ದಾರೆ.
ಗುಜರಾತ್ ಬಹಳ ಹಿಂದಿನಿಂದಲೂ ಭಯೋತ್ಪಾದನೆಯ ಗುರಿಯಾಗಿತ್ತು. ಸೂರತ್ ಮತ್ತು ಅಹಮದಾಬಾದ್ನಲ್ಲಿ ನಡೆದ ಸ್ಫೋಟಗಳಲ್ಲಿ ಗುಜರಾತ್ನ ಜನರು ಸಾವನ್ನಪ್ಪಿದರು. ಆಗ ಕೇಂದ್ರದಲ್ಲಿ ಕಾಂಗ್ರೆಸ್ ಇತ್ತು, ನಾವು ಭಯೋತ್ಪಾದನೆಯನ್ನು ಗುರಿಯಾಗಿಸಲು ಹೇಳಿದ್ರೆ, ಅವರು ನನ್ನನ್ನು ಟಾರ್ಗೆಟ್ ಮಾಡಿದ್ದರು ಎಂದು ತಿಳಿಸಿದ್ದಾರೆ.