ಮಹಾರಾಷ್ಟ್ರ ಮತ್ತು ಹರ್ಯಾಣದ ವಿಧಾನಸಭಾ ಚುನಾವಣೆ ಫಲಿತಾಂಶ ನಮ್ಮ ರಾಜ್ಯದ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಲ್ಲ ಎಂದು ಸಚಿವ ಆಂಜನೇಯ ಸೋಮವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮುಕ್ತ ದೇಶವನ್ನಾಗಿಸುತ್ತೇವೆ ಎಂದು ಬಿಜೆಪಿ ಹೇಳುತ್ತಿದೆ.ಆದರೆ ಅದು ಎಂದಿಗೂ ಸಾಧ್ಯವಿಲ್ಲ,ಸೂರ್ಯ ಚಂದ್ರ ಇರುವವರೆಗೂ ಅದು ಸಾಧ್ಯವಿಲ್ಲ ಎಂದ ಅವರು ದೇಶದಲ್ಲಿ ರಾಹುಲ್ ಹಠಾವೋ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ನಿನ್ನೆ ಮೊನ್ನೆ ಹುಟ್ಟಿದ ಪಕ್ಷ ಆದರೆ ಕಾಂಗ್ರೆಸ್ ಪಕ್ಷ ನಿನ್ನೆ ಮೊನ್ನೆ ಹುಟ್ಟಿದ್ದಲ್ಲ,ಬಿಜೆಪಿಯ ಕನಸು ನನಸಾಗುವುದಿಲ್ಲ.
ನಮ್ಮ ರಾಜ್ಯದಲ್ಲಿ ಈಗಲೂ ಚುನಾವಣೆ ನಡೆದರೆ,ಜನತೆ ಕಾಂಗ್ರೆಸ್ಗೆ ಬೆಂಬಲಿಸಲಿದ್ದಾರೆ ಎಂದು ಸಚಿವ ಅಂಜನೇಯ ತಿರುಗೇಟು ನೀಡಿದ್ದಾರೆ.