Webdunia - Bharat's app for daily news and videos

Install App

ಚುನಾವಣೆ ಗೆಲ್ಲಲು ಕಾಂಗ್ರೆಸ್ ಹೊಸ ಸಮಿತಿ

Webdunia
ಮಂಗಳವಾರ, 26 ಏಪ್ರಿಲ್ 2022 (16:32 IST)
ಸತತ 2 ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು, ಹಲವು ರಾಜ್ಯಗಳಲ್ಲಿ ಇದ್ದ ಅಧಿಕಾರವನ್ನೂ ಕಳೆದುಕೊಂಡ ಕಾಂಗ್ರೆಸ್,
 
ಇದೀಗ 2024ರ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಎದುರಾಗಬಹುದಾದ ರಾಜಕೀಯ ಸವಾಲುಗಳನ್ನು ಮೆಟ್ಟಿನಿಲ್ಲಲು ‘ಉನ್ನತಾಧಿಕಾರವುಳ್ಳ ಕಾರ್ಯಪಡೆ- 2024’ ರಚಿಸಿದೆ.

ಜೊತೆಗೆ ದೇಶದ ಪ್ರಸಕ್ತ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚಿಸಲು ಮೇ 13ರಿಂದ ರಾಜಸ್ಥಾನದ ಉದಯ್ಪುರದಲ್ಲಿ 3 ದಿನಗಳ ಚಿಂತನ ಶಿಬಿರ ಆಯೋಜನೆಗೂ ನಿರ್ಧರಿಸಿದೆ. ಈ ಶಿಬಿರದಲ್ಲಿ 400ಕ್ಕೂ ಹೆಚ್ಚು ಆಹ್ವಾನಿತ ಸದಸ್ಯರು ಭಾಗಿಯಾಗಲಿದ್ದಾರೆ.

ವಿಶೇಷವೆಂದರೆ, 2024ರ ಚುನಾವಣೆ ಗೆಲ್ಲುವ ರಣತಂತ್ರಗಳ ಕುರಿತು, ಚುನಾವಣಾ ರಣತಂತ್ರಗಾರ ಪ್ರಶಾಂತ್ ಕಿಶೋರ್ ಇತ್ತೀಚೆಗಷ್ಟೇ ಸೋನಿಯಾ ಗಾಂಧಿ ಒಳಗೊಂಡ ಪಕ್ಷದ ಹಿರಿಯ ನಾಯಕರ ತಂಡಕ್ಕೆ ವಿಸ್ತೃತ ವರದಿ ಸಲ್ಲಿಸಿದ್ದರು. ಮತ್ತೊಂದೆಡೆ ಇಂಥದ್ದೇ ವಿಷಯದ ಕುರಿತು ವರದಿ ಸಲ್ಲಿಸಲು ಸ್ವತಃ ಸೋನಿಯಾ ಕೂಡಾ 8 ಜನರ ಸಮಿತಿ ರಚಿಸಿದ್ದು, ಅದು ಏ.21ರಂದು ತನ್ನ ವರದಿ ಸಲ್ಲಿಸಿತ್ತು.

ಈ ವರದಿಗಳ ಬಗ್ಗೆ ಚರ್ಚಿಸಲು ಸೋನಿಯಾ ನೇತೃತ್ವದಲ್ಲಿ ಮಂಗಳವಾರ ಪಕ್ಷದ ಹಿರಿಯ ನಾಯಕರು ಇಲ್ಲಿ ಸಭೆ ಸೇರಿದ್ದರು. ಅದರಲ್ಲಿ ಎರಡೂ ವರದಿಗಳ ಬಗ್ಗೆ ಚರ್ಚಿಸಿದ ಬಳಿಕ, ‘ಉನ್ನತಾಧಿಕಾರವುಳ್ಳ ಕಾರ್ಯಪಡೆ- 2024’ ರಚನೆ ಮತ್ತು ಉದಯ್ಪುರದಲ್ಲಿ ಚಿಂತನ ಶಿಬಿರ ಆಯೋಜಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಭೆ ಬಳಿಕ ಪಕ್ಷದ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

ಮುಂದಿನ ಸುದ್ದಿ
Show comments