Webdunia - Bharat's app for daily news and videos

Install App

ರಾಹುಲ್‌ಗೆ ರಾಜಕೀಯ ಒಗ್ಗದು, ಬೇರೆ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲಿ: 'ಕೈ' ನಾಯಕ

Webdunia
ಬುಧವಾರ, 12 ಅಕ್ಟೋಬರ್ 2016 (16:40 IST)
ರಾಹುಲ್ ಗಾಂಧಿ ನಾಯಕತ್ವದ ಬಗ್ಗೆ ಆಂತರಿಕವಾಗಿಯೇ ಅಪಸ್ವರಗಳು ಕೇಳಿ ಬರುತ್ತಲೇ ಇರುತ್ತವೆ. ಪ್ರಿಯಾಂಕಾರನ್ನು ಕರೆ ತನ್ನಿ ಎಂಬ ಒತ್ತಾಯಗಳು ಆಗಾಗ ಹರಿದು ಬರುತ್ತಿರುತ್ತವೆ. ಮತ್ತೀಗ ಮಧ್ಯ ಪ್ರದೇಶದ ಕಾಂಗ್ರೆಸ್ ನಾಯಕ ಶೈಲೇಶ್ ಚೌಬೆ ಪಕ್ಷದ ಅಧ್ಯಕ್ಷೆ, ರಾಹುಲ್ ಗಾಂಧಿ ತಾಯಿ, ಸೋನಿಯಾ ಗಾಂಧಿ ಅವರಿಗೆ ರಾಹುಲ್ ಅವರನ್ನು ಪಕ್ಷದ ಉಪಾಧ್ಯಕ್ಷನ ಸ್ಥಾನದಿಂದ ಪದಚ್ಯುತಗೊಳಿಸಿ ಎಂದು ಒತ್ತಾಯಿಸಿದ್ದಾರೆ. ರಾಹುಲ್ ಅವರಿಗೆ ರಾಜಕೀಯ ಒಗ್ಗದು, ಅವರು ಬೇರೆ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಲಿ ಎಂದು ಅವರು   ಸೋನಿಯಾರಿಗೆ ವಿಡಿಯೋ ಸಂದೇಶ ಕಳುಹಿಸಿದ್ದಾರೆ. 
 
ಭಾರತೀಯ ಸೈನಿಕರ ಸೀಮಿತ ದಾಳಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ನೀಡಿದ್ದ ರಕ್ತದ ದಲ್ಲಾಳಿ ಹೇಳಿಕೆಗೆ ಅಸಮಧಾನ ವ್ಯಕ್ತಪಡಿಸಿರುವ ಚೌಬೆ, ಇದು 'ಸ್ವೀಕಾರಾರ್ಹವಲ್ಲ' ಎಂದು ವಿಡಿಯೋದಲ್ಲಿ ಹೇಳಿದ್ದು, ಈ ವಿಡಿಯೋ ಈಗ ವೈರಲ್ ಆಗಿದೆ. 
 
"ಪಕ್ಷಕ್ಕೆ ಪ್ರಯೋಜನಕಾರಿಯಲ್ಲದವರು ಮತ್ತು ರಾಜಕೀಯ ಕೌಶಲ್ಯಗಳಿಲ್ಲದವರು ಪಕ್ಷದಲ್ಲಿರಲು ಅರ್ಹರಲ್ಲ. ರಾಹುಲ್ ಅವರು ಪದೇ ಪದೇ ಕಾಂಗ್ರೆಸ್‌ಗೆ ಅಪಮಾನವಾಗುವಂತೆ ಮಾಡುತ್ತಿದ್ದಾರೆ. ಅವರನ್ನು ಉಪಾಧ್ಯಕ್ಷ ಸ್ಥಾನದಿಂದ ಪದಚ್ಯುತಗೊಳಿಸಬೇಕು ಎಂದು ನಾನು ಸೋನಿಯಾ ಅವರಲ್ಲಿ ಮನವಿ ಮಾಡುತ್ತೇನೆ ಎಂದಿರುವ ಚೌಬೆ, ರಾಹುಲ್ ಅವರು ಬೇರೆ ಉದ್ದಿಮೆಯಲ್ಲಿ ತೊಡಗಿಸಿಕೊಳ್ಳಲಿ ಎಂದು ಸಲಹೆ ನೀಡಿದ್ದಾರೆ. 
 
ಚೌಬೆ ಅವರ ಈ ಪಕ್ಷ ವಿರೋಧಿ ಹೇಳಿಕೆಗೆ ಪಕ್ಷದೊಳಗಿನಿಂದ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಬದ್ವಾನಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸುಖಪಾಲ್ ಪರ್ಮಾರ್  ಶೈಲೇಶ್ ಅವರನ್ನು 6 ವರ್ಷದ ಮಟ್ಟಿಗೆ ಪಕ್ಷದಿಂದ ಕೈ ಬಿಡುವಂತೆ ಹಿರಿಯ ನಾಯಕರನ್ನು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸದ ಅವಧಿ ಹೆಚ್ಚಳ: 10 ಗಂಟೆ ಕೆಲಸ ಮಾಡಿ ಅಂದ್ರೆ ಫ್ಯಾಮಿಲಿ ಏನು ಮಾಡ್ಬೇಕು

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಂದಿನ ಸುದ್ದಿ
Show comments