Select Your Language

Notifications

webdunia
webdunia
webdunia
webdunia

ಬಿರುಸಿನ ಪ್ರಚಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂಚನೆ

ಬಿರುಸಿನ ಪ್ರಚಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂಚನೆ
ಪಣಜಿ , ಶನಿವಾರ, 25 ಸೆಪ್ಟಂಬರ್ 2021 (13:18 IST)
ಪಣಜಿ : ಮುಂದಿನ ವರ್ಷ ಫೆಬ್ರುವರಿಯಲ್ಲಿ ಗೋವಾ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಆಡಳಿತಾರೂಢ ಬಿಜೆಪಿಯನ್ನು ಸೋಲಿಸಲು ಬಿರುಸಿನ ಪ್ರಚಾರ ಕೈಗೊಳ್ಳುವಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಪಕ್ಷದ ನಾಯಕರಿಗೆ ಸೂಚಿಸಿದ್ದಾರೆ.

'ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ರಾಹುಲ್ ಗಾಂಧಿ ಪಕ್ಷದ ನಾಯಕರಿಗೆ ಈ ಕುರಿತು ನಿರ್ದೇಶನ ನೀಡಿದ್ದಾರೆ' ಎಂದು ಕಾಂಗ್ರೆಸ್ನ ಗೋವಾ ಉಸ್ತುವಾರಿ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
'2022ರ ಫೆಬ್ರುವರಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ನಿಶ್ಚಿತ' ಎಂದೂ ಅವರು ತಿಳಿಸಿದ್ದಾರೆ.
ಚುನಾವಣಾ ವೀಕ್ಷಕ ಪಿ.ಚಿದಂಬರಂ, ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ. ಸಿ. ವೇಣುಗೋಪಾಲ್, ಜಿಪಿಸಿಸಿ ಅಧ್ಯಕ್ಷ ಗಿರೀಶ್ ಚೋಡಾನಕರ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ದಿಗಂಬರ್ ಕಾಮತ್ ಸಭೆಯಲ್ಲಿ ಭಾಗವಹಿಸಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ನ್ಯೂಯಾರ್ಕ್ನಲ್ಲಿ ಮೊಳಗಿದ 'ವಂದೇ ಮಾತರಂ', 'ಭಾರತ್ ಮಾತಾಕೀ ಜೈ'