Webdunia - Bharat's app for daily news and videos

Install App

ಕ್ಯಾಮರಾದಲ್ಲಿ ಸೆರೆಯಾಯ್ತು ಕಾಂಗ್ರೆಸ್ ನಾಯಕನ ಬರ್ಬರ ಹತ್ಯೆ (ವಿಡಿಯೋ)

Webdunia
ಬುಧವಾರ, 15 ಫೆಬ್ರವರಿ 2017 (14:58 IST)
ಕಾಂಗ್ರೆಸ್ ಮುಖಂಡನನ್ನು ಅಮಾನುಷವಾಗಿ ಹತ್ಯೆಗೈದ ಹೇಯ ಘಟನೆ ಮಹಾರಾಷ್ಟ್ರದ ಭಿವಂಡಿಯ ನಿಜಾಮಪುರದಲ್ಲಿ ನಡೆದಿದೆ. ಈ ಕರಾಳ ಕೃತ್ಯದ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಮತ್ತೀಗ ವೈರಲ್ ಆಗಿ ಹರಿದಾಡುತ್ತಿವೆ.

ಮಂಗಳವಾರ ತಡ ರಾತ್ರಿ ಈ ಕೃತ್ಯ ನಡೆದಿದ್ದು ಕಗ್ಗೊಲೆಯಾದ ಮನೋಜ್ ಮಾತ್ರೆ ಭಿವಂಡಿ ತಾಲ್ಲೂಕಿನ ಕಲ್ವಾ ನಿವಾಸಿಯಾಗಿದ್ದು, ವೈಯಕ್ತಿಕ ದ್ವೇಷದ ಕಾರಣದಿಂದ ತನ್ನ ವಾಸವನ್ನು ಓಸ್ವಾಲ್‌ವಾಡಿಗೆ ಬದಲಾಯಿಸಿದ್ದ. 
 
ನಿನ್ನೆ ರಾತ್ರಿ ಅಪಾರ್ಟ್‌ಮೆಂಟ್ ಬೇಸ್‌ಮೆಂಟ್‌ನಲ್ಲಿ ಕಾರ್ ಪಾರ್ಕ್ ಮಾಡಿ ಮನೆ ಕಡೆ ಹೋಗುತ್ತಿದ್ದ ಆತನ ಮೇಲೆ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಆತ ನೆಲಕ್ಕುರುಳುತ್ತಿದ್ದಂತೆ  ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಿ ಹಾಕಲಾಗಿದೆ. ಬಳಿಕ ನಂಬರ್ ಪ್ಲೇಟ್ ಇಲ್ಲದ ವಾಹನವನ್ನೇರಿ ಆರೋಪಿಗಳು ಪರಾರಿಯಾಗಿದ್ದಾರೆ. 
 
52 ವರ್ಷದ ಮನೋಜ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅದಾಗಲೇ ಅವರ ಪ್ರಾಣಪಕ್ಷಿ ಹಾರಿಹೋಗಿದೆ ಎಂದು ವೈದ್ಯರು ಘೋಷಿಸಿದ್ದಾರೆ.
 
ಕೊಲೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಈ ಹಿಂದೆ ಕೂಡ ಅವರನ್ನು ಸಾಯಿಸುವ ಪ್ರಯತ್ನ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 

ಕಾಂಗ್ರೆಸ್ ನಾಯಕನ ಬರ್ಬರ ಹತ್ಯೆ (ವಿಡಿಯೋ)
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments