Webdunia - Bharat's app for daily news and videos

Install App

ಕ್ಯಾಮರಾದಲ್ಲಿ ಸೆರೆಯಾಯ್ತು ಕಾಂಗ್ರೆಸ್ ನಾಯಕನ ಬರ್ಬರ ಹತ್ಯೆ (ವಿಡಿಯೋ)

Webdunia
ಬುಧವಾರ, 15 ಫೆಬ್ರವರಿ 2017 (14:58 IST)
ಕಾಂಗ್ರೆಸ್ ಮುಖಂಡನನ್ನು ಅಮಾನುಷವಾಗಿ ಹತ್ಯೆಗೈದ ಹೇಯ ಘಟನೆ ಮಹಾರಾಷ್ಟ್ರದ ಭಿವಂಡಿಯ ನಿಜಾಮಪುರದಲ್ಲಿ ನಡೆದಿದೆ. ಈ ಕರಾಳ ಕೃತ್ಯದ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು ಮತ್ತೀಗ ವೈರಲ್ ಆಗಿ ಹರಿದಾಡುತ್ತಿವೆ.

ಮಂಗಳವಾರ ತಡ ರಾತ್ರಿ ಈ ಕೃತ್ಯ ನಡೆದಿದ್ದು ಕಗ್ಗೊಲೆಯಾದ ಮನೋಜ್ ಮಾತ್ರೆ ಭಿವಂಡಿ ತಾಲ್ಲೂಕಿನ ಕಲ್ವಾ ನಿವಾಸಿಯಾಗಿದ್ದು, ವೈಯಕ್ತಿಕ ದ್ವೇಷದ ಕಾರಣದಿಂದ ತನ್ನ ವಾಸವನ್ನು ಓಸ್ವಾಲ್‌ವಾಡಿಗೆ ಬದಲಾಯಿಸಿದ್ದ. 
 
ನಿನ್ನೆ ರಾತ್ರಿ ಅಪಾರ್ಟ್‌ಮೆಂಟ್ ಬೇಸ್‌ಮೆಂಟ್‌ನಲ್ಲಿ ಕಾರ್ ಪಾರ್ಕ್ ಮಾಡಿ ಮನೆ ಕಡೆ ಹೋಗುತ್ತಿದ್ದ ಆತನ ಮೇಲೆ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಆತ ನೆಲಕ್ಕುರುಳುತ್ತಿದ್ದಂತೆ  ಮಾರಕಾಸ್ತ್ರಗಳಿಂದ ಮನಬಂದಂತೆ ಕೊಚ್ಚಿ ಹಾಕಲಾಗಿದೆ. ಬಳಿಕ ನಂಬರ್ ಪ್ಲೇಟ್ ಇಲ್ಲದ ವಾಹನವನ್ನೇರಿ ಆರೋಪಿಗಳು ಪರಾರಿಯಾಗಿದ್ದಾರೆ. 
 
52 ವರ್ಷದ ಮನೋಜ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅದಾಗಲೇ ಅವರ ಪ್ರಾಣಪಕ್ಷಿ ಹಾರಿಹೋಗಿದೆ ಎಂದು ವೈದ್ಯರು ಘೋಷಿಸಿದ್ದಾರೆ.
 
ಕೊಲೆಗೆ ಕಾರಣವೇನೆಂದು ತಿಳಿದು ಬಂದಿಲ್ಲ. ಈ ಹಿಂದೆ ಕೂಡ ಅವರನ್ನು ಸಾಯಿಸುವ ಪ್ರಯತ್ನ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. 

ಕಾಂಗ್ರೆಸ್ ನಾಯಕನ ಬರ್ಬರ ಹತ್ಯೆ (ವಿಡಿಯೋ)
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಣ್ವಸ್ತ್ರ ಬೆದರಿಕೆಗೆ ನಾವು ಜಗ್ಗಲ್ಲ, ಬಗ್ಗಲ್ಲ: ಭಾರತದ ತಾಕತ್ತು ಜಗತ್ತಿಗೆ ಗೊತ್ತಾಯಿತು ಎಂದ ಪ್ರಧಾನಿ ಮೋದಿ

PM Modi: ಪ್ರಧಾನಿ ಮೋದಿ ಭಾಷಣ ಕನ್ನಡದಲ್ಲಿ ಸಂಪೂರ್ಣವಾಗಿ ಇಲ್ಲಿದೆ ನೋಡಿ

ಭಾರತದ ಮೇಲಿನ ದಾಳಿಯನ್ನು ಸಂಭ್ರಮಿಸಿದ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ, ಪಾಕ್‌ ಸೇನೆಯನ್ನು ಬಣ್ಣಿಸಿದ್ದು ಹೀಗೇ

Operation Sindoor: 17 ನವಜಾತ ಹೆಣ್ಣು ಮಕ್ಕಳಿಗೆ ಸಿಂಧೂರ್‌ ನಾಮಕರಣ

ಪೌರ ಕಾರ್ಮಿಕರ ವಿಚಾರದಲ್ಲಿ ದಿಟ್ಟ ಹೆಜ್ಜೆಯಿಟ್ಟ ಸಿಎಂ ಸಿದ್ದರಾಮಯ್ಯ ಸರ್ಕಾರ

ಮುಂದಿನ ಸುದ್ದಿ
Show comments