Webdunia - Bharat's app for daily news and videos

Install App

ಸರ್ಜಿಕಲ್ ಸ್ಟ್ರೈಕ್ ಸೇನೆ ಮಾಡ್ತಿರೋ ನಾಟಕ ಸ್ವಾಮೀ.. ಎಂದ ಕಾಂಗ್ರೆಸ್ ನಾಯಕ!

Webdunia
ಮಂಗಳವಾರ, 2 ಜನವರಿ 2018 (08:47 IST)
ನವದೆಹಲಿ: ಭಾರತೀಯ ಸೇನೆ ಪಾಕ್ ಗಡಿಗೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದನ್ನು ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ನಾಟಕ ಎಂದಿದ್ದಾರೆ.
 

ಸರ್ಜಿಕಲ್ ಸ್ಟ್ರೈಕ್ ಸೇನೆಯ ನಾಟಕವಷ್ಟೇ ಎಂದು ಕಾಂಗ್ರೆಸ್ ನಾಯಕನ ಹೇಳಿಕೆ ನೀಡಿದ್ದು, ಇದಕ್ಕೆ ಆಡಳಿತಾರೂಢ ಬಿಜೆಪಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. 2016 ರ ಸೆಪ್ಟೆಂಬರ್ 28,29 ರಂದು ಭಾರತೀಯ ಸೇನೆ ಪಾಕ್ ಗಡಿಯೊಳಗೆ ನುಗ್ಗಿ ಉಗ್ರರನ್ನು ಸದೆಬಡಿದಿತ್ತು. ಇದರಲ್ಲಿ ಪಾಕ್ ಸೈನಿಕರೂ ಸಾವನ್ನಪ್ಪಿದ್ದರು. ಅದರ ಬಗ್ಗೆ ದೇಶವೇ ಹೆಮ್ಮೆ ಪಡುತ್ತಿದ್ದರೆ ಕಾಂಗ್ರೆಸ್ ನಾಯಕ ಮಾತ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

‘ಒಂದು ವಿಷಯವಂತೂ ಸ್ಪಷ್ಟ. ಆವತ್ತು ಸರ್ಜಿಕಲ್ ಸ್ಟ್ರೈಕ್ ನಡೆಸಿದ್ದು ಕೇವಲ ಡ್ರಾಮಾ, ಅದರಿಂದ ಯಾವ ಪರಿಣಾಮವೂ ಆಗಿಲ್ಲ. ನಮ್ಮ ದ್ವಿಪಕ್ಷೀಯ ನೀತಿಯ ಕುರಿತು ನಾವು ಪುನರಾಲೋಚನೆ ನಡೆಸಬೇಕಿದೆ’ ಎಂದು ದೀಕ್ಷಿತ್ ಹೇಳಿದ್ದಾರೆ.

ಇದಕ್ಕೆ ತೀವ್ರವಾಗಿ ಟೀಕಿಸಿರುವ ಬಿಜೆಪಿ, ಸಂದೀಪ್ ದೀಕ್ಷಿತ್ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ರಾಹುಲ್ ಗಾಂಧಿ ಬೆಳೆಸುತ್ತಿರುವ ಕೂಸು. ಇವರು ಮತ್ತೊಬ್ಬ ಮಣಿಶಂಕರ್ ಅಯ್ಯರ್ ಎಂದು ಜರೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments