Webdunia - Bharat's app for daily news and videos

Install App

ಅ.5ಕ್ಕೆ ದೆಹಲಿಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಭೇಟಿ

Webdunia
ಮಂಗಳವಾರ, 5 ಅಕ್ಟೋಬರ್ 2021 (08:55 IST)
ಬೆಂಗಳೂರು  :  ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಕರೆಯ ಮೇರೆಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅಕ್ಟೋಬರ್ 5 ರಂದು ದೆಹಲಿಗೆ ತೆರಳಲಿದ್ದಾರೆಂದು ತಿಳಿದುಬಂದಿದೆ.

ಇಂದು ಮಧ್ಯಾಹ್ನ 12.30ಕ್ಕೆ ಸೋನಿಯಾ ಅವರ ನಿವಾಸದಲ್ಲಿ ನಡೆಯಲಿರುವ ಸಭೆಯಲ್ಲಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ಹೀಗಾಗಿ, ಬೆಳಿಗ್ಗೆ 7.30ರ ವಿಮಾನದಲ್ಲಿ ಬೆಂಗಳೂರಿನಿಂದ ತೆರಳಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.
ದೆಹಲಿಗೆ ಬರುವಂತೆ ಸೋನಿಯಾ ಗಾಂಧಿ ಅವರಿಂದ ದಿಢೀರ್ ಆಹ್ವಾನ ಬಂದಿದೆ. ಯಾವ ವಿಷಯ ಕುರಿತು ಚರ್ಚಿಸಲು ಎಂಬ ಬಗ್ಗೆ ಮಾಹಿತಿ ಇಲ್ಲ. ಉಪ ಚುನಾವಣೆ ನಡೆಯಲಿರುವ ಹಾನಗಲ್ ಕ್ಷೇತ್ರದ ಟಿಕೆಟ್ ಹಂಚಿಕೆ, ಕೆಪಿಸಿಸಿ ಪುನರ್ ರಚನೆ ಹಾಗೂ ರಾಜ್ಯದಲ್ಲಿ ಪಕ್ಷ ಸಂಘಟನೆಗೆ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ' ಎಂದೂ ಮೂಲಗಳು ಹೇಳಿವೆ.
ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಇತ್ತೀಚೆಗಷ್ಟೇ ದೆಹಲಿಗೆ ಬೇಟಿ ನೀಡಿದ್ದರು. ಈ ವೇಳೆ ಪಕ್ಷದ ರಾಜ್ಯ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು ಕೇಂದ್ರ ನಾಯಕತ್ವದೊಂದಿಗೆ ಕೆಪಿಸಿಸಿ ಪುನರ್ ರಚನೆ ಕುರಿತು ಸುದೀರ್ಘ ಚರ್ಚೆಗಳನ್ನು ನಡೆಸಿದ್ದರು.
ಈ ಹಿಂದೆ ಆಯುಧ ಪೂಜೆಗೂ ಮುನ್ನ ಹೊಸ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸುವುದಾಗಿ ಪಕ್ಷ ಘೋಷಿಸಿತ್ತು. ಈ ಮೂಲಕ ಪಕ್ಷವು ಪುನರುಜ್ಜೀವನವನ್ನು ಕೈಗೊಳ್ಳುವ ನಿರೀಕ್ಷೆಯಿದೆ ಮತ್ತು ಅದೇ ವೇಳೆ 2023 ವಿಧಾನಸಭಾ ಚುನಾವಣೆಗೆ ಸಿದ್ಧಗೊಳಿಸಲು ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments