ಮೋದಿ 11 ದಿನ ಉಪವಾಸ ಮಾಡಿದ್ದು ಸುಳ್ಳು ಎಂದ ವೀರಪ್ಪ ಮೊಯ್ಲಿ: ಕಾಂಗ್ರೆಸ್ ಗೆ ಹೊಸ ತಲೆನೋವು

Krishnaveni K
ಬುಧವಾರ, 24 ಜನವರಿ 2024 (10:00 IST)
Photo Courtesy: facebook
ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ಮೊದಲು ಪ್ರಧಾನಿ ಮೋದಿ 11 ದಿನ ಉಪವಾಸ ವ್ರತ ಕೈಗೊಂಡಿದ್ದು ಭಾರೀ ಸುದ್ದಿಯಾಗಿದೆ.

ಪ್ರಾಣ ಪ್ರತಿಷ್ಠೆ ಬಳಿಕ ಮೋದಿ ಉಪವಾಸ ಅಂತ್ಯವಾಗಿತ್ತು. ಈ 11 ದಿನ ಮೋದಿ ಕೇವಲ ಎಳೆನೀರು ಮಾತ್ರ ಸೇವನೆ ಮಾಡುತ್ತಿದ್ದರು. ಆದರೆ ಕಾಂಗ್ರೆಸ್ ನಾಯಕ, ಮಾಜಿ ಸಿಎಂ ವೀರಪ್ಪ ಮೊಯ್ಲಿ ಇದೆಲ್ಲಾ ಸುಳ್ಳು ಎಂದಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.

ಮೋದಿ 11 ದಿನ ಉಪವಾಸ ಮಾಡಿದ್ದು ಸುಳ್ಳು. 11 ದಿನ ಉಪವಾಸ ಮಾಡಿದರೆ ಮನುಷ್ಯ ಬದುಕಲು ಸಾಧ್ಯವಿಲ್ಲ ಎಂದು ವೈದ್ಯರೇ ಹೇಳಿದ್ದಾರೆ. ಆದ್ದರಿಂದ ಮೋದಿ ಉಪವಾಸ ಮಾಡಿಲ್ಲ. ಮೋದಿಯನ್ನು ಗರ್ಭಗುಡಿ ಒಳಗೆ ಬಿಡಬಾರದಿತ್ತು. ರಾಜಧರ್ಮ ಪರಿಪಾಲನೆ ಮಾಡದ ಅವರಿಂದ ದೇವಾಲಯದ ಪಾವಿತ್ರ್ಯತೆ ಹೇಗೆ ಬರಲಿದೆ? ಎಂದು ಹೇಳುವ ಮೂಲಕ ಮೊಯ್ಲಿ ವಿವಾದ ಹುಟ್ಟುಹಾಕಿದ್ದಾರೆ.

ಅವರ ಈ ಹೇಳಿಕೆ ಬಿಜೆಪಿ ಭಾರೀ ಆಕ್ರೋಶ ವ್ಯಕ್ತಪಡಿಸಿದೆ. ವಿಪಕ್ಷ ನಾಯಕ ಆರ್. ಅಶೋಕ್ ಪ್ರಧಾನಿ ಒಬಿಸಿಗೆ ಸೇರಿದವರು ಎಂಬ ಕಾರಣಕ್ಕೆ ಈ ನಿಂದನೆ ಮಾಡುತ್ತಿದ್ದೀರಾ? ಇದೇನಾ ನಿಮ್ಮ ಜಾತ್ಯಾತೀತತೆ? ತಕ್ಷಣವೇ ಮೊಯ್ಲಿಯವರನ್ನು ಕಾಂಗ್ರೆಸ್ ಪಕ್ಷದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಮೊದಲೇ ರಾಮಮಂದಿರ ವಿಚಾರದಲ್ಲಿ ಕಾಂಗ್ರೆಸ್ ಜನರ ಕೆಂಗಣ್ಣಿಗೆ ಗುರಿಯಾಗಿದೆ. ಇದರ ನಡುವೆ ಇಂತಹದ್ದೊಂದು ಹೇಳಿಕೆ ಪಕ್ಷವನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ರಾಜ್ಯದಲ್ಲಿ ಒಂದೇ ದಿನದಲ್ಲಿ 257 ಆರೋಪಿಗಳ ಬಂಧನ

100 ವರ್ಷಗಳ ಬಳಿಕ ಆರ್‌ಎಸ್‌ಎಸ್ ಕಾನೂನು ಪಾಲಿಸಿದೆ: ಪ್ರಿಯಾಂಕ್ ಖರ್ಗೆ

ಶಬರಿಮಲೆ ಚಿನ್ನ ನಾಪತ್ತೆ ಪ್ರಕರಣ, ಎಸ್‌ಐಟಿ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪ್ರಿಯಾಂಕ್ ಖರ್ಗೆ ಕ್ಷೇತ್ರದಲ್ಲಿ ಯಶಸ್ವಿಯಾಗಿ ನಡೆದ ಆರ್‌ಎಸ್‌ಎಸ್‌ ಪಥಸಂಚಲನ

ಇನ್ನೇನು ಮದುವೆಗೆ ಒಂದು ಗಂಟೆಯಿರುವಾಗ ವಧುವನ್ನೇ ಕೊಂದ ವರ, ಕಾರಣ ಕೇಳಿದ್ರೆ ಶಾಕ್

ಮುಂದಿನ ಸುದ್ದಿ
Show comments