ಗಾಂಧೀಜಿ ಸಲಹೆ ಬದಿಗೊತ್ತಿದ್ದೇ ಕಾಂಗ್ರೆಸ್ ಪರಾಜಯಕ್ಕೆ ಕಾರಣವಂತೆ

Webdunia
ಸೋಮವಾರ, 20 ಜೂನ್ 2016 (12:01 IST)
ಕಾಂಗ್ರೆಸ್ ವಿವಿಧ ರಾಜ್ಯಗಳಲ್ಲಿ ಅಧಿಕಾರ ಕಳೆದುಕೊಂಡಿರುವುದಕ್ಕೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಗ್ರಾಮಗಳ ಮತ್ತು ಬಡವರ ವಿಕಾಸಕ್ಕೆ ಆದ್ಯತೆ ನೀಡಿ ಎಂದು ಮಹಾತ್ಮಾ ಗಾಂಧಿ ನೀಡಿದ್ದ ಸಲಹೆಯನ್ನು ಬದಿಗೊತ್ತಿದ್ದರಿಂದಲೇ ಅವರಿಗೆ ಈ ಪರಿಸ್ಥಿತಿ ಬಂದಿದೆ ಎಂದಿದ್ದಾರೆ. 

 
ತಮ್ಮ ಸರ್ಕಾರದ ಎರಡನೇ ವರ್ಷಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ 'ವಿಕಾಸ ಪರ್ವ' ಮೆರವಣಿಗೆಯಲ್ಲಿ ಭಾಗವಹಿಸಿ ಮಾತನ್ನಾಡುತ್ತಿದ್ದ ಅವರು, ಮಹಾತ್ಮಾ ಗಾಂಧೀಜಿಯವರು ಗ್ರಾಮೀಣ ಮತ್ತು ವಂಚಿತರ ವಿಕಾಸಕ್ಕಾಗಿ ಗ್ರಾಮ ಸ್ವರಾಜ್ಯ ಪರಿಕಲ್ಪನೆಯನ್ನು ನಮ್ಮ ಮುಂದೆ ಇಟ್ಟಿದ್ದರು. ಕಾಂಗ್ರೆಸ್ 54 ವರ್ಷ ಅಧಿಕಾರದಲ್ಲಿತ್ತು. ದೇಶದ ಅಭಿವೃದ್ಧಿ ದೃಷ್ಟಿಯಿಂದ ಇದೇನು ಕಡಿಮೆ ಸಮಯವಾಗಿರಲಿಲ್ಲ. ಆದರೆ ಕಾಂಗ್ರೆಸ್ ಗಾಂಧೀಜಿ ಸಲಹೆಯನ್ನು ಪರಿಗಣಿಸಲಿಲ್ಲ. ಇದರ ಪರಿಣಾಮವಾಗಿ ಅದು ನಿಧಾನವಾಗಿ ದೇಶದ ವಿವಿಧೆಡೆಗಳಲ್ಲಿ ಅದು ಅಧಿಕಾರವನ್ನು ಕಳೆದುಕೊಳ್ಳುತ್ತಿದೆ ಎಂದು ಸಿಂಗ್ ಹೇಳಿದ್ದಾರೆ. 
 
ಮತ್ತೊಂದೆಡೆ ಗಾಂಧೀಜಿಯವರ ಸಿದ್ಧಾಂತಗಳಿಗೆ ಮಾನ್ಯತೆ ಕೊಟ್ಟಿರುವ ಎನ್‌ಡಿಎ ಸರ್ಕಾರ ಗ್ರಾಮೀಣ ಕ್ಷೇತ್ರ ಮತ್ತು ಬಡವರ ಕಲ್ಯಾಣಕ್ಕೆ ತನ್ನನ್ನು ತಾನು ಸಮರ್ಪಿಸಿಕೊಂಡಿದೆ ಎಂದು ಸಿಂಗ್ ತಮ್ಮ ಸರ್ಕಾರವನ್ನು ಹೊಗಳಿಕೊಂಡಿದ್ದಾರೆ. 
 
ಈಗ ಕಾಂಗ್ರೆಸ್ ಪ್ರಭಾವ ಕರ್ನಾಟಕವನ್ನು ಹೊರತು ಪಡಿಸಿ ಪರ್ವತ ಪ್ರದೇಶಗಳಾದ ಹಿಮಾಚಲ ಪ್ರದೇಶ್, ಉತ್ತರಾಖಂಡ, ಮೇಘಾಲಯ, ಮಣಿಪುರಕ್ಕೆ ಮಾತ್ರ ಸೀಮಿತವಾಗಿದೆ ಎಂದಿದ್ದಾರೆ ಸಿಂಗ್. 

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ರೇಕ್ ಫಾಸ್ಟ್, ಡಿನ್ನರ್ ಮೀಟಿಂಗ್ ನಿಂದಲೇ ರಾಜ್ಯ ಕುಲಗೆಟ್ಟಿದೆ: ಬಿವೈ ವಿಜಯೇಂದ್ರ

ವೋಟ್ ಚೋರಿ ಚರಿತ್ರೆಯನ್ನೇ ಹೊಂದಿರುವ ಕಾಂಗ್ರೆಸ್ ಗೆ ಬಿಜೆಪಿ ಮೇಲೆ ಆರೋಪಿಸಲು ನೈತಿಕತೆಯಿಲ್ಲ: ಸಿಟಿ ರವಿ

ಹಿಂದೂಗಳ ಪವಿತ್ರ ಕಾರ್ತಿಕ ದೀಪಕ್ಕೆ ಅನುಮತಿ ನೀಡಿದ ಜಡ್ಜ್ ವಿರುದ್ಧ ಸಹಿ ಹಾಕಿದ ರಾಜ್ಯದ ಮೂವರು ಕೈ ಸಂಸದರು ಇವರೇ

ಡಿನ್ನರ್ ಮೀಟಿಂಗ್ ನಡುವೆ ಸಿಎಂ, ಡಿಸಿಎಂಗೆ ದೆಹಲಿ ಬುಲಾವ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments