Webdunia - Bharat's app for daily news and videos

Install App

ಉತ್ತರಾಖಂಡ ಕಾಂಗ್ರೆಸ್‌ಗೆ ಹೊಡೆತ: ಬಿಜೆಪಿ ಕೈ ಹಿಡಿದ ಶಾಸಕ ರಾಜೇಂದ್ರ ಸಿಂಗ್ ಭಂಡಾರಿ

Sampriya
ಭಾನುವಾರ, 17 ಮಾರ್ಚ್ 2024 (17:28 IST)
Photo Courtesy X
ನವದೆಹಲಿ: ಉತ್ತರಾಖಂಡದ ಶಾಸಕ ರಾಜೇಂದ್ರ ಸಿಂಗ್ ಭಂಡಾರಿ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಲೋಕಸಭೆ ಚುನಾವಣೆಗೂ ಮುನ್ನಾ ದೊಡ್ಡ ಹಿನ್ನಡೆಯಾಗಿದೆ. 
 
ನವದೆಹಲಿಯಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಮೂರು ಬಾರಿ ಕಾಂಗ್ರೆಸ್ ಶಾಸಕರಾಗಿದ್ದ ಭಂಡಾರಿ, ಈ ಹಿಂದೆ ರಾಜ್ಯದಲ್ಲಿ ಸಚಿವರೂ ಆಗಿದ್ದು, ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ಬಿಜೆಪಿ ಸೇರಿದ್ದರು.
 
ಆಡಳಿತ ಪಕ್ಷಕ್ಕೆ ಸೇರಿದ ನಂತರ ಭಂಡಾರಿ ಅವರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವವನ್ನು ಶ್ಲಾಘಿಸಿದರು ಮತ್ತು ಬಿಜೆಪಿಯ ನೀತಿಗಳಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ ಎಂದು ಹೇಳಿದರು.
 
"ನಾನು ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ನನ್ನ ನಂಬಿಕೆಯನ್ನು ವ್ಯಕ್ತಪಡಿಸಿದ್ದೇನೆ, ಅವರು ರಾಷ್ಟ್ರವನ್ನು ಮುನ್ನಡೆಸಲು ಕೆಲಸ ಮಾಡುತ್ತಿರುವ ರೀತಿ ನನಗೆ ಸ್ಫೂರ್ತಿ ನೀಡಿದೆ... ನನಗೆ ಬಿಜೆಪಿಯ ನೀತಿಗಳಲ್ಲಿ ಸಂಪೂರ್ಣ ನಂಬಿಕೆಯಿದೆ" ಎಂದು ಅವರು ಹೇಳಿದರು.
 
ಭಂಡಾರಿ ಅವರನ್ನು ಬಿಜೆಪಿಗೆ ಸ್ವಾಗತಿಸಿದ ಕೇಂದ್ರ ಸಚಿವ ಪಿಯೂಷ್ ಗೋಯಲ್, ಮಾಜಿ ಕಾಂಗ್ರೆಸ್ ನಾಯಕ ಪ್ರಧಾನಿ ಮೋದಿಯವರ ಕೆಲಸದಿಂದ ಸ್ಫೂರ್ತಿ ಪಡೆದಿದ್ದಾರೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments